ಛಲವಾದಿ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ‌ ಸೊಣ್ಣಪ್ಪನಹಳ್ಳಿ ರಮೇಶ್ ನೇಮಕ

ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.

ರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಪತ್ರವನ್ನು ನೀಡಿದ್ದಾರೆ ಎಂದು ಛಲವಾದಿ ಮುಖಂಡರಾದ ಗೂಳ್ಯ ಹನುಮಣ್ಣ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಮಾಹಿತಿ ನೀಡಿದ ಅವರು, ಕಳೆದ ಹಲವು ವರ್ಷಗಳಿಂದ ಸಮುದಾಯದ ಕೆಲಸಗಳನ್ನು ನಾವು ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ತಮ್ಮ ಕಚೇರಿಗೆ ಕರೆಸಿಕೊಂಡ ಸಿದ್ದಯ್ಯನವರು ಕಳೆದ ಕೆಲ ವರ್ಷಗಳಿಂದ ತಾಲ್ಲೂಕಿನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ದಿಗಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನು ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎಂದರು.

ಛಲವಾದಿ ಹಿರಿಯ ಮುಖಂಡರಾದ ಮರಿಯಪ್ಪ ಮಾತನಾಡಿ, ನಮ್ಮ ಸಮುದಾಯಕ್ಕೆ ಮತ್ತಷ್ಟು ಬಲ ತುಂಬಲು, ಸಮುದಾಯದ ಅಭಿವೃದ್ದಿಗಾಗಿ ತಾಲ್ಲೂಕಿನಲ್ಲಿ ಕೆಲಸ ಮಾಡಲೆಂದು ರಾಜ್ಯಾಧ್ಯಕ್ಷರಾದ ಸಿದ್ದಯ್ಯನವರು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೂತನ ಅಧ್ಯಕ್ಷರನ್ನಾಗಿ ಸೊಣ್ಣಪ್ಪನಹಳ್ಳಿ ರಮೇಶ್ ಅವರನ್ನ ನೇಮಕ ಮಾಡಿ ಆದೇಶಿಸಿದ್ದಾರೆ. ಸದ್ಯ ಅವರ ಬೆಂಬಲಕ್ಕೆ ನಿಂತು ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು.

ಮುಖಂಡರಾದ ಮುನಿರಾಜು ಮಾತನಾಡಿ, ಛಲವಾದಿ ಮಹಾಸಭಾವು ನಮ್ಮ ತಾಲ್ಲೂಕಿನಲ್ಲಿ ಕಳೆದ 20 ವರ್ಷಗಳಿಂದ ಉತ್ತಮವಾಗಿ ಸಮುದಾಯದ ಸೇವೆಯನ್ನು ಮಾಡಿಕೊಂಡು ಬಂದಿದೆ. ಇತ್ತೀಚೆಗೆ ತಾಲೂಕಿನ ಕೆಲ ಮುಖಂಡರು ಸಮುದಾಯವನ್ನು ಕಡೆಗಣಿಸಿದ್ದನ್ನು ಮನಗಂಡ ರಾಜ್ಯಮಟ್ಟದ ನಾಯಕರು ಇದೀಗ ಸಮುದಾಯದ ಬೆಳವಣಿಗೆಗಾಗಿ ನೂತನ ಅಧ್ಯಕ್ಷರನ್ನಾಗಿ ರಮೇಶ್ ಅವರನ್ನು ನೇಮಕ ಮಾಡಿದ್ದಾರೆ. ಅವರ ವಿಶ್ವಾಸವನ್ನು ಉಳಿಸಿಕೊಂಡು ಇನ್ನು ಮುಂದೆ ತಾಲ್ಲೂಕಿನಲ್ಲಿರುವ ಸಮುದಾಯದ ಜನತೆಗೆ ಸರ್ಕಾರದಿಂದ ಸಿಗಬೇಕಾದ ಸೇವೆಗಳನ್ನು ಸಿಗುವಂತೆ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.

ನೂತನ ತಾಲ್ಲೂಕು ಅಧ್ಯಕ್ಷ ಸೊಣ್ಣಪ್ಪನಹಳ್ಳಿ ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಛಲವಾದಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಇನ್ನು ಮುಂದೆಯೂ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ರಾಜ್ಯಾಧ್ಯಕ್ಷರು ನನ್ನ ಮೇಲೆ ಇರಿಸಿರುವ ನಂಬಿಕೆಯನ್ನು ಉಳಿಸಿಕೊಂಡು ತಾಲೂಕಿನ ಜನತೆಯ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನೂತನ ತಾಲ್ಲೂಕು ಅಧ್ಯಕ್ಷರನ್ನು ಸಮುದಾಯದ ಮುಖಂಡರು ಹಾರ ಹಾಕಿ ಶಾಲು ಹಾಕಿ ಸನ್ಮಾನಿಸಿದರು.

ಈ ವೇಳೆ ರಮೇಶ್, ಅಜಯ್ ಕುಮಾರ್, ತಳಗವಾರ ಸತೀಶ್, ಸೇರಿದಂತೆ ಸಮುದಾಯದ ಹಲವು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago