ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ. ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡು, ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದರು.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…