ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ. ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡು, ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದರು.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…
ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…
ದೇವನಹಳ್ಳಿ: ತೈಲ ಬೆಲೆ ಏರಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವಿರುದ್ಧ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ,…
ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಸಿಎಂ ಕುರ್ಚಿ ಕಾದಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಸ್ಪರ್ಶ ನೀಡುವ ಲಕ್ಷಣಗಳು…
ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…