ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ. ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡು, ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದರು.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…