ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ಗಡಿಭಾಗದಲ್ಲಿರುವ ಜಕ್ಕಲಮಡಗು ಜಲಾಶಯ ಅವಳಿ ನಗರಗಳಿಗೆ ಕುಡಿಯುವ ನೀರು ಪೂರೈಸುವ ನೀರಿನ ಸೆಲೆಯಾಗಿದ್ದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಕ್ಕಲಮಡುಗು ಜಲಾಶಯ ಸಂಪೂರ್ಣ ಭರ್ತಿಯಾಗಿ ಕೋಡಿಬಿದ್ದಿದೆ. ಜಲಾಶಯದ ನೀರನ್ನೇ ನಂಬಿರುವ ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಹಿನ್ನೆಲೆ ಜಕ್ಕಲಮಡಗು ಜಲಾಶಯಕ್ಕೆ ಇಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರಸಭೆ ಸದಸ್ಯರು ಭೇಟಿ ನೀಡಿ ಕೋಡಿ ಬಿದ್ದಿರುವ ದೃಶ್ಯ ಕಣ್ತುಂಬಿಕೊಂಡು, ಜಲಾಶಯದ ನೀರಿಗೆ ಬಾಗಿನ ಅರ್ಪಿಸಿದರು.
ಜಕ್ಕಲಮಡು ಜಲಾಶಯ 4390 ದಶಲಕ್ಷ ಲೀಟರ್ ಸಂಗ್ರಹಣಾ ಸಾಮರ್ಥ್ಯ, 51.25 ಚ.ಮೀ. ಶೇಖರಣಾ ವಿಸ್ತಿರ್ಣ ಹೊಂದಿದೆ. ಈ ಜಲಾಶಯದಿಂದ ಚಿಕ್ಕಬಳ್ಳಾಪುರ ನಗರ ಶೇ.68 ಪಾಲು ಪಡೆದರೆ, ದೊಡ್ಡಬಳ್ಳಾಪುರ ನಗರಕ್ಕೆ ಶೇ.32 ಪಾಲಿದೆ.
ಈ ಬಾರಿ ಜಲಾಶಯ ತುಂಬಿ ಹರಿಯಲಿದೆ ಎಂಬ ಜನರ ಆಶಾಭಾವನೆಗೆ ತಕ್ಕಂತೆ ಉತ್ತಮ ಮಳೆಯಾಗಿ ಜಲಾಶಯ ತುಂಬಿರುವುದು ಎರಡು ನಗರಗಳ ಜನತೆಗೆ ಅತ್ಯಂತ ಸಂತಸದ ವಿಷಯವಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…