ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಈ ಮುಂದೆ ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.
ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…