Categories: ರಾಜ್ಯ

ಜಗಜೀವನ್ ರಾಂ ಅವರು ಮಹಾನ್ ದೇಶಪ್ರೇಮಿ ಹಾಗೂ ಪ್ರಜಾಪ್ರಭುತ್ವವಾದಿ- ಸಿಎಂ ಸಿದ್ದರಾಮಯ್ಯ

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು  ಹೋರಾಟ ಮಾಡಿದ ಎಲ್ಲರಿಗೂ ಈ  ಮುಂದೆ  ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.

ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.

ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago