ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು ಹೋರಾಟ ಮಾಡಿದ ಎಲ್ಲರಿಗೂ ಈ ಮುಂದೆ ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.
ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.
ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…