Categories: ರಾಜ್ಯ

ಜಗಜೀವನ್ ರಾಂ ಅವರು ಮಹಾನ್ ದೇಶಪ್ರೇಮಿ ಹಾಗೂ ಪ್ರಜಾಪ್ರಭುತ್ವವಾದಿ- ಸಿಎಂ ಸಿದ್ದರಾಮಯ್ಯ

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು  ಹೋರಾಟ ಮಾಡಿದ ಎಲ್ಲರಿಗೂ ಈ  ಮುಂದೆ  ಎಂಥ ದೇಶ ನಿರ್ಮಾಣವಾಗಬೇಕೆಂಬ ಕನಸಿತ್ತು. ಇದಕ್ಕೆ ಪೂರಕವಾದ ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿ ಸೂಕ್ತ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರಚನೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸೋಷಿಯಲ್ ಜಸ್ಟೀಸ್ ಫೌಂಡೇಶನ್ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಡಾ. ಹರೀಶ್ ಕುಮಾರ್ ಅವರ “ಆಧುನಿಕ ಭಾರತದ ನಿರ್ಮಾತೃ ಡಾ. ಬಾಬು ಜಗಜೀವನರಾಮ್ ಮತ್ತು ಬಾಬೂಜಿ ಚಿತ್ರ ಸಂಪುಟ” ಕೃತಿಯನ್ನು ಬಿಡುಗಡೆಗೊಳಿಸಿ, ಮಾತನಾಡಿದರು.

ಸಮಾಜದಲ್ಲಿ ಹಸಿವು, ಬಡತನ, ನಿರುದ್ಯೋಗ, ದಾರಿದ್ರ್ಯ, ಅನಕ್ಷರತೆ ಎಲ್ಲವೂ ತೊಲಗಿ, ಸಮಾನ ಅವಕಾಶಗಳಿರುವ ಸಮಸಮಾಜ ನಿರ್ಮಾಣವಾಗಬೇಕು. ಅದಕ್ಕಾಗಿಯೇ ಪ್ರಯತ್ನ ಮಾಡಿದರು. ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ವಿರುದ್ಧ ಹೋರಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಣೆ ಮಾಡುವುದೇ ಎಲ್ಲಾ ಮಹನೀಯರಿಗೆ ಸಲ್ಲಿಸುವ ಗೌರವ ಎಂದರು.

ಇತಿಹಾಸ ತಿರುಚಿರುವುದನ್ನು ನಾವು ನೋಡಿದ್ದೇವೆ. ಮುಂದೆ ಏನಾಗಬೇಕೆಬುದನ್ನು ಚರ್ಚಿಸುವುದು ಉತ್ತಮ. ಅಂಬೇಡ್ಕರ್, ಗಾಂಧಿ, ನೆಹರು, ಜಗಜೀವನ್ ರಾಂ ಅವರು ಹೇಳಿದಂಥ ಭಾರತ ನಿರ್ಮಾಣವಾಗಬೇಕು. ನಮಗೆ ಅವಕಾಶ ಸಿಕ್ಕಿದಾಗ ಅಂಥ ಭಾರತ, ರಾಜ್ಯವನ್ನು ನಿರ್ಮಿಸಬೇಕು. ಆ ದಿಕ್ಕಿನಲ್ಲಿ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ಎಲ್ಲಾ ಸರ್ಕಾರಗಳ ಉದ್ದೇಶ ಆದೇ ಆಗಬೇಕು. ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವುದೇ ಸಂವಿಧಾನದ ಉದ್ದೇಶ. ಅದನ್ನು ಜಾರಿ ಮಾಡುವ ಪ್ರಯತ್ನ ನಮ್ಮದು. ಅನೇಕ ಶಕ್ತಿಗಳು ಅದಕ್ಕೆ ವಿರುದ್ಧವಾಗಿವೆ. ಅಂಥ ಶಕ್ತಿಗಳನ್ನು ವಿರುದ್ಧ ಹೋರಾಡುವ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಭದ್ರ ಹಿತಾಸಕ್ತಿಗಳು ಹಿಂದೆಯೂ ಇದ್ದರು, ಈಗಲೂ ಇದ್ದಾರೆ. ಅವರನ್ನು ಗುರುತಿಸಿ ಅವರಿಗೆ ಶಕ್ತಿ ಬಾರದಂತೆ ನೋಡಿಕೊಳ್ಳುವ ಕೆಲಸವಾಗಬೇಕು ಎಂದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

9 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

10 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

10 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

12 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

16 hours ago