ಜಗತ್ತಿನ ಜ್ಞಾನದ ಬೆಳಕು ಸಂವಿಧಾನ ಶಿಲ್ಪಿ ಡಾ.ಬಿ‌.ಆರ್.ಅಂಬೇಡ್ಕರ್- ಕಸಾಪ ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್

ಜಗತ್ತಿನ ಜ್ಞಾನದ ಬೆಳಕು ಸಂವಿಧಾನ ಶಿಲ್ಪಿ ಡಾ.ಬಿ‌.ಆರ್.ಅಂಬೇಡ್ಕರ್ ಆಗಿದ್ದಾರೆ. ಅವರಿಂದ ಭಾರತ ಬಹುದೊಡ್ಡ  ಪ್ರಜಾಪ್ರಭುತ್ವ ರಾಷ್ಟ್ರವಾಗಲು ಸಾಧ್ಯವಾಯಿತು ಎಂದು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ತಿಳಿಸಿದರು.

ದೊಡ್ಡಬಳ್ಳಾಪುರ ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಾಲಯದಲ್ಲಿ ನಡೆದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಾರತೀಯ ಸ್ವಾತಂತ್ರ್ಯ ಮತ್ತು ಸಮಾನತೆಯೊಂದಿಗೆ ಬದುಕಲು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿಕೊಟ್ಟ ಸಂವಿಧಾನ ಕಾರಣವಾಗಿದೆ. ಅಂಬೇಡ್ಕರ್ ಅವರ ಅವಿರತ  ಪರಿಶ್ರಮ ಮತ್ತು ಹೋರಾಟದ ಫಲವಾಗಿ ಸಾಮಾಜಿಕ ಸುಧಾರಣೆ ಸಾಧ್ಯವಾಯಿತು. ಅಂಬೇಡ್ಕರ್ ರವರು ನೀಡಿರುವ ವಿಚಾರಧಾರೆಗಳು ಇಂದಿಗೂ ಸಹ  ಪ್ರಸ್ತುತವಾಗಿವೆ. ಅವರ ವಿಚಾರಧಾರೆಗಳನ್ನು  ಜಾರಿಗೊಳಿಸುವ ಮೂಲಕ ಭಾರತವನ್ನು ಮತ್ತಷ್ಟು ಸದೃಢವಾಗಿ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ಸುಧಾರಣೆಗೆ ಜನಸಾಮಾನ್ಯರಿಗೆ ಶಿಕ್ಷಣ ನೀಡುವುದರಿಂದ ಮಾತ್ರ ಸಾಮಾಜಿಕ ವಿಮೋಚನೆ ಸಾಧ್ಯವೆಂದು ಪ್ರತಿಪಾದಿಸಿದರು.  ಶಾಲೆಗಳು, ಕಾಲೇಜುಗಳು, ಹಾಸ್ಟೆಲ್‌ಗಳು ಹೆಚ್ಚು ಹೆಚ್ಚು ಪ್ರಾರಂಭಿಸುವ ಮೂಲಕ ಸರ್ವರಿಗೂ ಶಿಕ್ಷಣ ದೊರೆಯಬೇಕು. ಶಿಕ್ಷಣದ ಕುರಿತು ಅಂಬೇಡ್ಕರ್ ಅವರ ದೃಷ್ಟಿಕೋನ ಅನನ್ಯವಾದದ್ದು. ಶಿಕ್ಷಣದಿಂದ ದೇಶದ  ಪ್ರಗತಿಯ ಸಾಧ್ಯವೆಂದು ಹೇಳುವ ಮೂಲಕ‌ ಶಿಕ್ಷಣದ ಮಹತ್ವವನ್ನು ಜಗತ್ತಿಗೆ ತಿಳಿಸಿದರು.

ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟರೆಡ್ಡಿ ಮಾತನಾಡಿ, ಭಾರತದ ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ನಾವು ಅವರ ಜನ್ಮ ದಿನಾಚರಣೆಯನ್ನು ಆಚರಿಸಬೇಕಾಗಿದೆ. ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯವಾಗಿದೆ. ಅಂಬೇಡ್ಕರ್ ಅವರ ವಿಶೇಷ ಬದ್ಧತೆ ಮತ್ತು ವಿದ್ವತ್ತುಗಳಿಂದಾಗಿಯೇ ಭಾರತ ಸಂವಿಧಾನವು ಶ್ರೇಷ್ಠ ಸಂವಿಧಾನ ಎಂದು ಹೆಸರು ಮಾಡಲು ಸಾಧ್ಯವಾಯಿತು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್,  ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು,  ಸಾಸಲು ಹೋಬಳಿ‌ ಕಸಾಪ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಕಸಾಪ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ಸಫೀರ್ ಅಹಮದ್,  ನಾಗರತ್ನಮ್ಮ, ಭಾರತ್ ಸ್ಕೌಟ್ಸ್ ಮತ್ತು ಗೈಡ್  ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಶಿಕ್ಷಕರುಗಳಾದ  ಕೋದಂಡರಾಮ್,  ನಾಗೇಶ್, ಗಣೇಶ್,  ಕಲಾವಿದರಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ರಾಮಕೃಷ್ಣ,  ಮುನಿರತ್ನಮ್ಮ, ಮುನಿರಾಜು ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago