ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರು ಭಾಗಿ

ಜಗದ್ವಿಖ್ಯಾತ​‌ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ ಭಕ್ತರು ಒಡಿಶಾದ ಪುರಿಯತ್ತ ಆಗಮಿಸುತ್ತಿದ್ದಾರೆ.

ವಿಶ್ವದಲ್ಲಿಯೇ ಪ್ರಸಿದ್ಧವಾದ ಪುರಿ ಜಗನ್ನಾಥ ರಥಯಾತ್ರೆ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯಾ ದಿನ ಆರಂಭವಾಗಿ ದಶಮಿಯಂದು ಪೂರ್ಣಗೊಳ್ಳುತ್ತದೆ.

ಒಡಿಶಾ ರಾಜ್ಯದ ಕರಾವಳಿ ನಗರವಾದ ಪುರಿಯಲ್ಲಿ 12ನೇ ಶತಮಾನದಲ್ಲಿ ಈ ಜಗನ್ನಾಥ ದೇವಾಲಯವನ್ನು ನಿರ್ಮಿಸಲಾಯ್ತು. ವಿಷ್ಣುವಿನ ಅವತಾರವಾದ ಜಗನ್ನಾಥ, ಆತನ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ಮೂವರು ಮೂಲ ದೇವರುಗಳಾಗಿ ಇಲ್ಲಿ ನೆಲೆಸಿದ್ದಾರೆ. ಅವರನ್ನು ವಿಶೇಷವಾಗಿ ಪೂಜಿಸುವ ಉದ್ದೇಶದಿಂದ ಇಲ್ಲಿ ಪ್ರತಿ ವರ್ಷ ಭವ್ಯ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ದೇವಾಲಯದಲ್ಲಿ ನಡೆಯುವ ಜಗನ್ನಾಥನ 12 ಯಾತ್ರೆಗಳಲ್ಲಿ ಈ ರಥಯಾತ್ರೆ ಅತ್ಯಂತ ಪವಿತ್ರವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ಪುರಿಗೆ ಬಂದು ಸೇರುತ್ತಾರೆ.

ಈ ದಿವ್ಯಯಾತ್ರೆಯಲ್ಲಿ ಜಗನ್ನಾಥ ದೇವರು, ಸಹೋದರ ಬಲರಾಮ, ಮತ್ತು ಸಹೋದರಿ ಸುಭದ್ರಾ ಇರಲಿದ್ದಾರೆ. ಬೃಹತ್‌ ರಥಗಳಲ್ಲಿ ಜಗನ್ನಾಥ ದೇವಾಲಯದಿಂದ ಗುಂಡಿಚಾ ದೇವಾಲಯದವರೆಗೆ ಪ್ರಯಾಣ ಬೆಳಸಲಾಗುತ್ತದೆ.

ರಥಗಳ ವಿಶೇಷತೆಗಳು:

ದೇವರು: ಜಗನ್ನಾಥ ರಥದ ಹೆಸರು: ನಂದಿಘೋಷ ಚಕ್ರಗಳು: 18 , ಎತ್ತರ: 46 ಅಡಿ

ದೇವರು: ಬಲರಾಮ ರಥದ ಹೆಸರು: ತಾಳಧ್ವಜ, ಚಕ್ರಗಳು: 16, ಎತ್ತರ: 45 ಅಡಿ

ದೇವರು: ಸುಭದ್ರಾ ರಥದ ಹೆಸರು: ಪದ್ಮಧ್ವಜ,  ಚಕ್ರಗಳು: 14,  ಎತ್ತರ: 42 ಅಡಿ

ಪುರಿ ಜಗನ್ನಾಥ ದೇಗುಲ – ಗುಂಡಿಚಾ ದೇವಾಲಯದವರೆಗೆ 2.5 ಕಿಮೀ ದೇವರು ಸ್ವತಃ ಭಕ್ತರನ್ನು ಭೇಟಿ ಮಾಡಲು ಹೊರಡುವ ಪವಿತ್ರ ಕ್ಷಣ. ಗುಂಡಿಚಾದಲ್ಲಿ 8 ದಿನಗಳ ವಾಸ. ನಂತರ ಮೂಲ ದೇಗುಲಕ್ಕೆ ಹಿಂತಿರುಗುವನ್ನು “ಬಾಹುಡಾ ಯಾತ್ರೆ” ಎಂದು ಕರೆಯುತ್ತಾರೆ.

ರಥಯಾತ್ರೆಯನ್ನು ಜೀವನ ಯಾನ ಮತ್ತು ಆತ್ಮ ವಿಮೋಚನೆಯನ್ನು ವಿವರಿಸುವ ರೀತಿಯಲ್ಲಿ ಆಚರಿಸಲಾಗುತ್ತದೆ. ಪುರಿ ರಥಯಾತ್ರೆಯಲ್ಲಿ ತನ್ನ ಭಕ್ತರನ್ನು ನೋಡಲು ಜಗನ್ನಾಥನೇ ರಥದಲ್ಲಿ ಬರುತ್ತಾನೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಜಗನ್ನಾಥ ತಾನು ಹುಟ್ಟಿದ ಸ್ಥಳವಾದ ಮಥುರಾಗೆ ಮರಳುತ್ತಾನೆ ಎಂದು ನಂಬಲಾಗಿದೆ. ರಥವನ್ನು ಎಳೆಯುವಾಗ ಹಗ್ಗವನ್ನು ಮುಟ್ಟುವ ಭಕ್ತರಿಗೆ ಆಶೀರ್ವಾದ ಮತ್ತು ಪಾಪ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿದೆ.

ಎಲ್ಲಾ ವರ್ಗದ ಜನರನ್ನು ಈ ರಥಯಾತ್ರೆ ಒಂದುಗೂಡಿಸುವುದರಿಂದ ಇದನ್ನು ಐಕ್ಯತೆಯ ಆಚರಣೆ ಎಂದು ಕರೆಯಲಾಗುತ್ತದೆ. ಪುರಿ ರಾಜನಿಂದ ಸೇರಾ ಪನ್ಹಾರಾ ಸಮಾರಂಭವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸುತ್ತದೆ.

ಈ ರಥೋತ್ಸವವು ಕೇವಲ ಉತ್ಸವವಲ್ಲ…..ಭಕ್ತಿಯ ದರ್ಶನ, ಸಂಸ್ಕೃತಿಯ ಉತ್ಸವ…!

Ramesh Babu

Journalist

Recent Posts

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

2 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

13 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

15 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

17 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

18 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

1 day ago