ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರು ಭಾಗಿ

ಜಗದ್ವಿಖ್ಯಾತ​‌ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ ಭಕ್ತರು ಒಡಿಶಾದ ಪುರಿಯತ್ತ ಆಗಮಿಸುತ್ತಿದ್ದಾರೆ.

ವಿಶ್ವದಲ್ಲಿಯೇ ಪ್ರಸಿದ್ಧವಾದ ಪುರಿ ಜಗನ್ನಾಥ ರಥಯಾತ್ರೆ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯಾ ದಿನ ಆರಂಭವಾಗಿ ದಶಮಿಯಂದು ಪೂರ್ಣಗೊಳ್ಳುತ್ತದೆ.

ಒಡಿಶಾ ರಾಜ್ಯದ ಕರಾವಳಿ ನಗರವಾದ ಪುರಿಯಲ್ಲಿ 12ನೇ ಶತಮಾನದಲ್ಲಿ ಈ ಜಗನ್ನಾಥ ದೇವಾಲಯವನ್ನು ನಿರ್ಮಿಸಲಾಯ್ತು. ವಿಷ್ಣುವಿನ ಅವತಾರವಾದ ಜಗನ್ನಾಥ, ಆತನ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ಮೂವರು ಮೂಲ ದೇವರುಗಳಾಗಿ ಇಲ್ಲಿ ನೆಲೆಸಿದ್ದಾರೆ. ಅವರನ್ನು ವಿಶೇಷವಾಗಿ ಪೂಜಿಸುವ ಉದ್ದೇಶದಿಂದ ಇಲ್ಲಿ ಪ್ರತಿ ವರ್ಷ ಭವ್ಯ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ದೇವಾಲಯದಲ್ಲಿ ನಡೆಯುವ ಜಗನ್ನಾಥನ 12 ಯಾತ್ರೆಗಳಲ್ಲಿ ಈ ರಥಯಾತ್ರೆ ಅತ್ಯಂತ ಪವಿತ್ರವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ಪುರಿಗೆ ಬಂದು ಸೇರುತ್ತಾರೆ.

ಈ ದಿವ್ಯಯಾತ್ರೆಯಲ್ಲಿ ಜಗನ್ನಾಥ ದೇವರು, ಸಹೋದರ ಬಲರಾಮ, ಮತ್ತು ಸಹೋದರಿ ಸುಭದ್ರಾ ಇರಲಿದ್ದಾರೆ. ಬೃಹತ್‌ ರಥಗಳಲ್ಲಿ ಜಗನ್ನಾಥ ದೇವಾಲಯದಿಂದ ಗುಂಡಿಚಾ ದೇವಾಲಯದವರೆಗೆ ಪ್ರಯಾಣ ಬೆಳಸಲಾಗುತ್ತದೆ.

ರಥಗಳ ವಿಶೇಷತೆಗಳು:

ದೇವರು: ಜಗನ್ನಾಥ ರಥದ ಹೆಸರು: ನಂದಿಘೋಷ ಚಕ್ರಗಳು: 18 , ಎತ್ತರ: 46 ಅಡಿ

ದೇವರು: ಬಲರಾಮ ರಥದ ಹೆಸರು: ತಾಳಧ್ವಜ, ಚಕ್ರಗಳು: 16, ಎತ್ತರ: 45 ಅಡಿ

ದೇವರು: ಸುಭದ್ರಾ ರಥದ ಹೆಸರು: ಪದ್ಮಧ್ವಜ,  ಚಕ್ರಗಳು: 14,  ಎತ್ತರ: 42 ಅಡಿ

ಪುರಿ ಜಗನ್ನಾಥ ದೇಗುಲ – ಗುಂಡಿಚಾ ದೇವಾಲಯದವರೆಗೆ 2.5 ಕಿಮೀ ದೇವರು ಸ್ವತಃ ಭಕ್ತರನ್ನು ಭೇಟಿ ಮಾಡಲು ಹೊರಡುವ ಪವಿತ್ರ ಕ್ಷಣ. ಗುಂಡಿಚಾದಲ್ಲಿ 8 ದಿನಗಳ ವಾಸ. ನಂತರ ಮೂಲ ದೇಗುಲಕ್ಕೆ ಹಿಂತಿರುಗುವನ್ನು “ಬಾಹುಡಾ ಯಾತ್ರೆ” ಎಂದು ಕರೆಯುತ್ತಾರೆ.

ರಥಯಾತ್ರೆಯನ್ನು ಜೀವನ ಯಾನ ಮತ್ತು ಆತ್ಮ ವಿಮೋಚನೆಯನ್ನು ವಿವರಿಸುವ ರೀತಿಯಲ್ಲಿ ಆಚರಿಸಲಾಗುತ್ತದೆ. ಪುರಿ ರಥಯಾತ್ರೆಯಲ್ಲಿ ತನ್ನ ಭಕ್ತರನ್ನು ನೋಡಲು ಜಗನ್ನಾಥನೇ ರಥದಲ್ಲಿ ಬರುತ್ತಾನೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಜಗನ್ನಾಥ ತಾನು ಹುಟ್ಟಿದ ಸ್ಥಳವಾದ ಮಥುರಾಗೆ ಮರಳುತ್ತಾನೆ ಎಂದು ನಂಬಲಾಗಿದೆ. ರಥವನ್ನು ಎಳೆಯುವಾಗ ಹಗ್ಗವನ್ನು ಮುಟ್ಟುವ ಭಕ್ತರಿಗೆ ಆಶೀರ್ವಾದ ಮತ್ತು ಪಾಪ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿದೆ.

ಎಲ್ಲಾ ವರ್ಗದ ಜನರನ್ನು ಈ ರಥಯಾತ್ರೆ ಒಂದುಗೂಡಿಸುವುದರಿಂದ ಇದನ್ನು ಐಕ್ಯತೆಯ ಆಚರಣೆ ಎಂದು ಕರೆಯಲಾಗುತ್ತದೆ. ಪುರಿ ರಾಜನಿಂದ ಸೇರಾ ಪನ್ಹಾರಾ ಸಮಾರಂಭವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸುತ್ತದೆ.

ಈ ರಥೋತ್ಸವವು ಕೇವಲ ಉತ್ಸವವಲ್ಲ…..ಭಕ್ತಿಯ ದರ್ಶನ, ಸಂಸ್ಕೃತಿಯ ಉತ್ಸವ…!

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

24 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago