ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರು ಭಾಗಿ

ಜಗದ್ವಿಖ್ಯಾತ​‌ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ ಭಕ್ತರು ಒಡಿಶಾದ ಪುರಿಯತ್ತ ಆಗಮಿಸುತ್ತಿದ್ದಾರೆ.

ವಿಶ್ವದಲ್ಲಿಯೇ ಪ್ರಸಿದ್ಧವಾದ ಪುರಿ ಜಗನ್ನಾಥ ರಥಯಾತ್ರೆ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯಾ ದಿನ ಆರಂಭವಾಗಿ ದಶಮಿಯಂದು ಪೂರ್ಣಗೊಳ್ಳುತ್ತದೆ.

ಒಡಿಶಾ ರಾಜ್ಯದ ಕರಾವಳಿ ನಗರವಾದ ಪುರಿಯಲ್ಲಿ 12ನೇ ಶತಮಾನದಲ್ಲಿ ಈ ಜಗನ್ನಾಥ ದೇವಾಲಯವನ್ನು ನಿರ್ಮಿಸಲಾಯ್ತು. ವಿಷ್ಣುವಿನ ಅವತಾರವಾದ ಜಗನ್ನಾಥ, ಆತನ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ಮೂವರು ಮೂಲ ದೇವರುಗಳಾಗಿ ಇಲ್ಲಿ ನೆಲೆಸಿದ್ದಾರೆ. ಅವರನ್ನು ವಿಶೇಷವಾಗಿ ಪೂಜಿಸುವ ಉದ್ದೇಶದಿಂದ ಇಲ್ಲಿ ಪ್ರತಿ ವರ್ಷ ಭವ್ಯ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ದೇವಾಲಯದಲ್ಲಿ ನಡೆಯುವ ಜಗನ್ನಾಥನ 12 ಯಾತ್ರೆಗಳಲ್ಲಿ ಈ ರಥಯಾತ್ರೆ ಅತ್ಯಂತ ಪವಿತ್ರವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ಪುರಿಗೆ ಬಂದು ಸೇರುತ್ತಾರೆ.

ಈ ದಿವ್ಯಯಾತ್ರೆಯಲ್ಲಿ ಜಗನ್ನಾಥ ದೇವರು, ಸಹೋದರ ಬಲರಾಮ, ಮತ್ತು ಸಹೋದರಿ ಸುಭದ್ರಾ ಇರಲಿದ್ದಾರೆ. ಬೃಹತ್‌ ರಥಗಳಲ್ಲಿ ಜಗನ್ನಾಥ ದೇವಾಲಯದಿಂದ ಗುಂಡಿಚಾ ದೇವಾಲಯದವರೆಗೆ ಪ್ರಯಾಣ ಬೆಳಸಲಾಗುತ್ತದೆ.

ರಥಗಳ ವಿಶೇಷತೆಗಳು:

ದೇವರು: ಜಗನ್ನಾಥ ರಥದ ಹೆಸರು: ನಂದಿಘೋಷ ಚಕ್ರಗಳು: 18 , ಎತ್ತರ: 46 ಅಡಿ

ದೇವರು: ಬಲರಾಮ ರಥದ ಹೆಸರು: ತಾಳಧ್ವಜ, ಚಕ್ರಗಳು: 16, ಎತ್ತರ: 45 ಅಡಿ

ದೇವರು: ಸುಭದ್ರಾ ರಥದ ಹೆಸರು: ಪದ್ಮಧ್ವಜ,  ಚಕ್ರಗಳು: 14,  ಎತ್ತರ: 42 ಅಡಿ

ಪುರಿ ಜಗನ್ನಾಥ ದೇಗುಲ – ಗುಂಡಿಚಾ ದೇವಾಲಯದವರೆಗೆ 2.5 ಕಿಮೀ ದೇವರು ಸ್ವತಃ ಭಕ್ತರನ್ನು ಭೇಟಿ ಮಾಡಲು ಹೊರಡುವ ಪವಿತ್ರ ಕ್ಷಣ. ಗುಂಡಿಚಾದಲ್ಲಿ 8 ದಿನಗಳ ವಾಸ. ನಂತರ ಮೂಲ ದೇಗುಲಕ್ಕೆ ಹಿಂತಿರುಗುವನ್ನು “ಬಾಹುಡಾ ಯಾತ್ರೆ” ಎಂದು ಕರೆಯುತ್ತಾರೆ.

ರಥಯಾತ್ರೆಯನ್ನು ಜೀವನ ಯಾನ ಮತ್ತು ಆತ್ಮ ವಿಮೋಚನೆಯನ್ನು ವಿವರಿಸುವ ರೀತಿಯಲ್ಲಿ ಆಚರಿಸಲಾಗುತ್ತದೆ. ಪುರಿ ರಥಯಾತ್ರೆಯಲ್ಲಿ ತನ್ನ ಭಕ್ತರನ್ನು ನೋಡಲು ಜಗನ್ನಾಥನೇ ರಥದಲ್ಲಿ ಬರುತ್ತಾನೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಜಗನ್ನಾಥ ತಾನು ಹುಟ್ಟಿದ ಸ್ಥಳವಾದ ಮಥುರಾಗೆ ಮರಳುತ್ತಾನೆ ಎಂದು ನಂಬಲಾಗಿದೆ. ರಥವನ್ನು ಎಳೆಯುವಾಗ ಹಗ್ಗವನ್ನು ಮುಟ್ಟುವ ಭಕ್ತರಿಗೆ ಆಶೀರ್ವಾದ ಮತ್ತು ಪಾಪ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿದೆ.

ಎಲ್ಲಾ ವರ್ಗದ ಜನರನ್ನು ಈ ರಥಯಾತ್ರೆ ಒಂದುಗೂಡಿಸುವುದರಿಂದ ಇದನ್ನು ಐಕ್ಯತೆಯ ಆಚರಣೆ ಎಂದು ಕರೆಯಲಾಗುತ್ತದೆ. ಪುರಿ ರಾಜನಿಂದ ಸೇರಾ ಪನ್ಹಾರಾ ಸಮಾರಂಭವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸುತ್ತದೆ.

ಈ ರಥೋತ್ಸವವು ಕೇವಲ ಉತ್ಸವವಲ್ಲ…..ಭಕ್ತಿಯ ದರ್ಶನ, ಸಂಸ್ಕೃತಿಯ ಉತ್ಸವ…!

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

7 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

17 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

17 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago