ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ: ಲಕ್ಷಾಂತರ ಭಕ್ತರು ಭಾಗಿ

ಜಗದ್ವಿಖ್ಯಾತ​‌ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ ಭಕ್ತರು ಒಡಿಶಾದ ಪುರಿಯತ್ತ ಆಗಮಿಸುತ್ತಿದ್ದಾರೆ.

ವಿಶ್ವದಲ್ಲಿಯೇ ಪ್ರಸಿದ್ಧವಾದ ಪುರಿ ಜಗನ್ನಾಥ ರಥಯಾತ್ರೆ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯಾ ದಿನ ಆರಂಭವಾಗಿ ದಶಮಿಯಂದು ಪೂರ್ಣಗೊಳ್ಳುತ್ತದೆ.

ಒಡಿಶಾ ರಾಜ್ಯದ ಕರಾವಳಿ ನಗರವಾದ ಪುರಿಯಲ್ಲಿ 12ನೇ ಶತಮಾನದಲ್ಲಿ ಈ ಜಗನ್ನಾಥ ದೇವಾಲಯವನ್ನು ನಿರ್ಮಿಸಲಾಯ್ತು. ವಿಷ್ಣುವಿನ ಅವತಾರವಾದ ಜಗನ್ನಾಥ, ಆತನ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ಮೂವರು ಮೂಲ ದೇವರುಗಳಾಗಿ ಇಲ್ಲಿ ನೆಲೆಸಿದ್ದಾರೆ. ಅವರನ್ನು ವಿಶೇಷವಾಗಿ ಪೂಜಿಸುವ ಉದ್ದೇಶದಿಂದ ಇಲ್ಲಿ ಪ್ರತಿ ವರ್ಷ ಭವ್ಯ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ದೇವಾಲಯದಲ್ಲಿ ನಡೆಯುವ ಜಗನ್ನಾಥನ 12 ಯಾತ್ರೆಗಳಲ್ಲಿ ಈ ರಥಯಾತ್ರೆ ಅತ್ಯಂತ ಪವಿತ್ರವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ಪುರಿಗೆ ಬಂದು ಸೇರುತ್ತಾರೆ.

ಈ ದಿವ್ಯಯಾತ್ರೆಯಲ್ಲಿ ಜಗನ್ನಾಥ ದೇವರು, ಸಹೋದರ ಬಲರಾಮ, ಮತ್ತು ಸಹೋದರಿ ಸುಭದ್ರಾ ಇರಲಿದ್ದಾರೆ. ಬೃಹತ್‌ ರಥಗಳಲ್ಲಿ ಜಗನ್ನಾಥ ದೇವಾಲಯದಿಂದ ಗುಂಡಿಚಾ ದೇವಾಲಯದವರೆಗೆ ಪ್ರಯಾಣ ಬೆಳಸಲಾಗುತ್ತದೆ.

ರಥಗಳ ವಿಶೇಷತೆಗಳು:

ದೇವರು: ಜಗನ್ನಾಥ ರಥದ ಹೆಸರು: ನಂದಿಘೋಷ ಚಕ್ರಗಳು: 18 , ಎತ್ತರ: 46 ಅಡಿ

ದೇವರು: ಬಲರಾಮ ರಥದ ಹೆಸರು: ತಾಳಧ್ವಜ, ಚಕ್ರಗಳು: 16, ಎತ್ತರ: 45 ಅಡಿ

ದೇವರು: ಸುಭದ್ರಾ ರಥದ ಹೆಸರು: ಪದ್ಮಧ್ವಜ,  ಚಕ್ರಗಳು: 14,  ಎತ್ತರ: 42 ಅಡಿ

ಪುರಿ ಜಗನ್ನಾಥ ದೇಗುಲ – ಗುಂಡಿಚಾ ದೇವಾಲಯದವರೆಗೆ 2.5 ಕಿಮೀ ದೇವರು ಸ್ವತಃ ಭಕ್ತರನ್ನು ಭೇಟಿ ಮಾಡಲು ಹೊರಡುವ ಪವಿತ್ರ ಕ್ಷಣ. ಗುಂಡಿಚಾದಲ್ಲಿ 8 ದಿನಗಳ ವಾಸ. ನಂತರ ಮೂಲ ದೇಗುಲಕ್ಕೆ ಹಿಂತಿರುಗುವನ್ನು “ಬಾಹುಡಾ ಯಾತ್ರೆ” ಎಂದು ಕರೆಯುತ್ತಾರೆ.

ರಥಯಾತ್ರೆಯನ್ನು ಜೀವನ ಯಾನ ಮತ್ತು ಆತ್ಮ ವಿಮೋಚನೆಯನ್ನು ವಿವರಿಸುವ ರೀತಿಯಲ್ಲಿ ಆಚರಿಸಲಾಗುತ್ತದೆ. ಪುರಿ ರಥಯಾತ್ರೆಯಲ್ಲಿ ತನ್ನ ಭಕ್ತರನ್ನು ನೋಡಲು ಜಗನ್ನಾಥನೇ ರಥದಲ್ಲಿ ಬರುತ್ತಾನೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಜಗನ್ನಾಥ ತಾನು ಹುಟ್ಟಿದ ಸ್ಥಳವಾದ ಮಥುರಾಗೆ ಮರಳುತ್ತಾನೆ ಎಂದು ನಂಬಲಾಗಿದೆ. ರಥವನ್ನು ಎಳೆಯುವಾಗ ಹಗ್ಗವನ್ನು ಮುಟ್ಟುವ ಭಕ್ತರಿಗೆ ಆಶೀರ್ವಾದ ಮತ್ತು ಪಾಪ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿದೆ.

ಎಲ್ಲಾ ವರ್ಗದ ಜನರನ್ನು ಈ ರಥಯಾತ್ರೆ ಒಂದುಗೂಡಿಸುವುದರಿಂದ ಇದನ್ನು ಐಕ್ಯತೆಯ ಆಚರಣೆ ಎಂದು ಕರೆಯಲಾಗುತ್ತದೆ. ಪುರಿ ರಾಜನಿಂದ ಸೇರಾ ಪನ್ಹಾರಾ ಸಮಾರಂಭವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸುತ್ತದೆ.

ಈ ರಥೋತ್ಸವವು ಕೇವಲ ಉತ್ಸವವಲ್ಲ…..ಭಕ್ತಿಯ ದರ್ಶನ, ಸಂಸ್ಕೃತಿಯ ಉತ್ಸವ…!

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 hour ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

2 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

5 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

11 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

22 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago