ಜಗದ್ವಿಖ್ಯಾತ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ಈ ಭವ್ಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಲಕ್ಷಾಂತರ ಭಕ್ತರು ಒಡಿಶಾದ ಪುರಿಯತ್ತ ಆಗಮಿಸುತ್ತಿದ್ದಾರೆ.
ವಿಶ್ವದಲ್ಲಿಯೇ ಪ್ರಸಿದ್ಧವಾದ ಪುರಿ ಜಗನ್ನಾಥ ರಥಯಾತ್ರೆ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯಾ ದಿನ ಆರಂಭವಾಗಿ ದಶಮಿಯಂದು ಪೂರ್ಣಗೊಳ್ಳುತ್ತದೆ.
ಒಡಿಶಾ ರಾಜ್ಯದ ಕರಾವಳಿ ನಗರವಾದ ಪುರಿಯಲ್ಲಿ 12ನೇ ಶತಮಾನದಲ್ಲಿ ಈ ಜಗನ್ನಾಥ ದೇವಾಲಯವನ್ನು ನಿರ್ಮಿಸಲಾಯ್ತು. ವಿಷ್ಣುವಿನ ಅವತಾರವಾದ ಜಗನ್ನಾಥ, ಆತನ ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ಮೂವರು ಮೂಲ ದೇವರುಗಳಾಗಿ ಇಲ್ಲಿ ನೆಲೆಸಿದ್ದಾರೆ. ಅವರನ್ನು ವಿಶೇಷವಾಗಿ ಪೂಜಿಸುವ ಉದ್ದೇಶದಿಂದ ಇಲ್ಲಿ ಪ್ರತಿ ವರ್ಷ ಭವ್ಯ ರಥೋತ್ಸವವನ್ನು ಆಚರಿಸಲಾಗುತ್ತದೆ. ಈ ದೇವಾಲಯದಲ್ಲಿ ನಡೆಯುವ ಜಗನ್ನಾಥನ 12 ಯಾತ್ರೆಗಳಲ್ಲಿ ಈ ರಥಯಾತ್ರೆ ಅತ್ಯಂತ ಪವಿತ್ರವಾದದ್ದು ಎಂದು ಪರಿಗಣಿಸಲಾಗಿದೆ. ಇದನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ಪುರಿಗೆ ಬಂದು ಸೇರುತ್ತಾರೆ.
ಈ ದಿವ್ಯಯಾತ್ರೆಯಲ್ಲಿ ಜಗನ್ನಾಥ ದೇವರು, ಸಹೋದರ ಬಲರಾಮ, ಮತ್ತು ಸಹೋದರಿ ಸುಭದ್ರಾ ಇರಲಿದ್ದಾರೆ. ಬೃಹತ್ ರಥಗಳಲ್ಲಿ ಜಗನ್ನಾಥ ದೇವಾಲಯದಿಂದ ಗುಂಡಿಚಾ ದೇವಾಲಯದವರೆಗೆ ಪ್ರಯಾಣ ಬೆಳಸಲಾಗುತ್ತದೆ.
ರಥಗಳ ವಿಶೇಷತೆಗಳು:
ದೇವರು: ಜಗನ್ನಾಥ ರಥದ ಹೆಸರು: ನಂದಿಘೋಷ ಚಕ್ರಗಳು: 18 , ಎತ್ತರ: 46 ಅಡಿ
ದೇವರು: ಬಲರಾಮ ರಥದ ಹೆಸರು: ತಾಳಧ್ವಜ, ಚಕ್ರಗಳು: 16, ಎತ್ತರ: 45 ಅಡಿ
ದೇವರು: ಸುಭದ್ರಾ ರಥದ ಹೆಸರು: ಪದ್ಮಧ್ವಜ, ಚಕ್ರಗಳು: 14, ಎತ್ತರ: 42 ಅಡಿ
ಪುರಿ ಜಗನ್ನಾಥ ದೇಗುಲ – ಗುಂಡಿಚಾ ದೇವಾಲಯದವರೆಗೆ 2.5 ಕಿಮೀ ದೇವರು ಸ್ವತಃ ಭಕ್ತರನ್ನು ಭೇಟಿ ಮಾಡಲು ಹೊರಡುವ ಪವಿತ್ರ ಕ್ಷಣ. ಗುಂಡಿಚಾದಲ್ಲಿ 8 ದಿನಗಳ ವಾಸ. ನಂತರ ಮೂಲ ದೇಗುಲಕ್ಕೆ ಹಿಂತಿರುಗುವನ್ನು “ಬಾಹುಡಾ ಯಾತ್ರೆ” ಎಂದು ಕರೆಯುತ್ತಾರೆ.
ರಥಯಾತ್ರೆಯನ್ನು ಜೀವನ ಯಾನ ಮತ್ತು ಆತ್ಮ ವಿಮೋಚನೆಯನ್ನು ವಿವರಿಸುವ ರೀತಿಯಲ್ಲಿ ಆಚರಿಸಲಾಗುತ್ತದೆ. ಪುರಿ ರಥಯಾತ್ರೆಯಲ್ಲಿ ತನ್ನ ಭಕ್ತರನ್ನು ನೋಡಲು ಜಗನ್ನಾಥನೇ ರಥದಲ್ಲಿ ಬರುತ್ತಾನೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಈ ರಥಯಾತ್ರೆಯಲ್ಲಿ ಜಗನ್ನಾಥ ತಾನು ಹುಟ್ಟಿದ ಸ್ಥಳವಾದ ಮಥುರಾಗೆ ಮರಳುತ್ತಾನೆ ಎಂದು ನಂಬಲಾಗಿದೆ. ರಥವನ್ನು ಎಳೆಯುವಾಗ ಹಗ್ಗವನ್ನು ಮುಟ್ಟುವ ಭಕ್ತರಿಗೆ ಆಶೀರ್ವಾದ ಮತ್ತು ಪಾಪ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿದೆ.
ಎಲ್ಲಾ ವರ್ಗದ ಜನರನ್ನು ಈ ರಥಯಾತ್ರೆ ಒಂದುಗೂಡಿಸುವುದರಿಂದ ಇದನ್ನು ಐಕ್ಯತೆಯ ಆಚರಣೆ ಎಂದು ಕರೆಯಲಾಗುತ್ತದೆ. ಪುರಿ ರಾಜನಿಂದ ಸೇರಾ ಪನ್ಹಾರಾ ಸಮಾರಂಭವನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮ ದೇವರ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಎಂಬುದನ್ನು ಸಾಬೀತುಪಡಿಸುತ್ತದೆ.
ಈ ರಥೋತ್ಸವವು ಕೇವಲ ಉತ್ಸವವಲ್ಲ…..ಭಕ್ತಿಯ ದರ್ಶನ, ಸಂಸ್ಕೃತಿಯ ಉತ್ಸವ…!
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…