ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ….
ವೈಎಸ್ಆರ್ಸಿಪಿ ಪಕ್ಷದ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.
ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್ಪುರಂ ಹೆದ್ದಾರಿಯಲ್ಲಿ ವೈಎಸ್ಆರ್ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜಗನ್ ಮೋಹನ್ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್ಆರ್ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿನ ಮುಂಭಾಗದಲ್ಲಿ ಬಿದ್ದಿದ್ದಾನೆ. ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ.
ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಗಳು ವ್ಯಕ್ತವಾಗುತ್ತಿವೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…