ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ….
ವೈಎಸ್ಆರ್ಸಿಪಿ ಪಕ್ಷದ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.
ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್ಪುರಂ ಹೆದ್ದಾರಿಯಲ್ಲಿ ವೈಎಸ್ಆರ್ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜಗನ್ ಮೋಹನ್ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್ಆರ್ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿನ ಮುಂಭಾಗದಲ್ಲಿ ಬಿದ್ದಿದ್ದಾನೆ. ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ.
ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಗಳು ವ್ಯಕ್ತವಾಗುತ್ತಿವೆ.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…