ಜಗನ್ ಮೋಹನ್ ರೆಡ್ಡಿ ರೋಡ್ ಶೋ: ಕಾರಿನ ಚಕ್ರಕ್ಕೆ ವೈಎಸ್‌ಆರ್‌ಸಿಪಿ ಪಕ್ಷದ ಬೆಂಬಲಿಗ ಸಿಲುಕಿ ಸಾವು

ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ….

ವೈಎಸ್‌ಆರ್‌ಸಿಪಿ ಪಕ್ಷದ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.

ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್‌ಪುರಂ ಹೆದ್ದಾರಿಯಲ್ಲಿ ವೈಎಸ್‌ಆರ್‌ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಜಗನ್‌ ಮೋಹನ್‌ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್‌ಆರ್‌ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್​​ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿನ ಮುಂಭಾಗದಲ್ಲಿ ಬಿದ್ದಿದ್ದಾನೆ.  ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ.

ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆಕ್ರೋಗಳು ವ್ಯಕ್ತವಾಗುತ್ತಿವೆ.

Ramesh Babu

Journalist

Recent Posts

ಮೇ 20 ಇ-ಫಾರ್ಮಸಿ ವಿರೋಧಿ ಬಂದ್‌ಗೆ ಔಷಧ ವ್ಯಾಪಾರಿಗಳ ಬೆಂಬಲ

ದೊಡ್ಡಬಳ್ಳಾಪುರ: ದೇಶದಲ್ಲಿ ಇ-ಫಾರ್ಮಸಿ ಹಾಗೂ ಆನ್ಲೈನ್ ಮೂಲಕ ಔಷಧ ಮಾರಾಟವನ್ನು ವಿರೋಧಿಸಿ ಮೇ 20 ರಂದು ದೇಶವ್ಯಾಪಿ ಕರೆ ನೀಡಿರುವ…

7 hours ago

ಹಾಡೋನಹಳ್ಳಿ ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…

8 hours ago

ವಿ.ಡಿ ಸತೀಶನ್ ಕೇರಳದ ನೂತನ ಮುಖ್ಯಮಂತ್ರಿ

ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…

13 hours ago

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ ಪರೀಕ್ಷೆಯ ಅಕ್ರಮ ಖಂಡಿಸಿ “ಕೈ” ಪ್ರತಿಭಟನೆ

ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…

14 hours ago

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

1 day ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

1 day ago