ಆಂಧ್ರ ಪ್ರದೇಶದ ಮಾಜಿ ಸಿಎಂ ಹಾಗೂ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ರೋಡ್ ಶೋ ವೇಳೆ ವ್ಯಕ್ತಿಯೋರ್ವ ಅವರ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ….
ವೈಎಸ್ಆರ್ಸಿಪಿ ಪಕ್ಷದ ಬೆಂಬಲಿಗ ಚೀಲಿ ಸಿಂಗಯ್ಯ (54) ಮೃತ ದುರ್ವೈವಿ.
ಪಲ್ನಾಡು ಜಿಲ್ಲೆಗೆ ಭೇಟಿ ನೀಡಿದ್ದಾಗ ಈ ಅವಘಡ ಸಂಭವಿಸಿದೆ. ಗುಂಟೂರು ಜಿಲ್ಲೆಯ ಎಟುಕುರು ಬಳಿಯ ಲಾಲ್ಪುರಂ ಹೆದ್ದಾರಿಯಲ್ಲಿ ವೈಎಸ್ಆರ್ಸಿಪಿ ಆಯೋಜಿಸಿದ್ದ ರ್ಯಾಲಿ ವೇಳೆ ಜಗನ್ ಪ್ರಯಾಣಿಸುತ್ತಿದ್ದ ಕಾರು ವ್ಯಕ್ತಿ ಮೇಲೆ ಹರಿದಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಜಗನ್ ಮೋಹನ್ ರೆಡ್ಡಿ ಅವರನ್ನು ನೋಡಲು ರಸ್ತೆ ಬದಿ ನೂರಾರು ಸಂಖ್ಯೆಯಲ್ಲಿ ವೈಎಸ್ಆರ್ಸಿಪಿ ಕಾರ್ಯಕರ್ತರು ನೆರೆದಿದ್ದರು. ಅಲ್ಲದೇ ಜಗನ್ ಗೆ ಹಾರ ಹಾಕಿ ಕೈ ಕುಲುಕಲು ಮುಗಿಬಿದ್ದಿದ್ದು, ಜಗನ್ ಕಾರಿನ ಡೋರ್ ತೆಗೆದು ಅಭಿಮಾನಿಗಳತ್ತ ಕೈಬಿಸುತ್ತಿದ್ದರೆ, ಇತ್ತ ಚಾಲಕನ ಕಡೆಗೆ ಅಭಿಮಾನಿ ಸಿಂಗಯ್ಯ ಕಾರಿನ ಮುಂಭಾಗದಲ್ಲಿ ಬಿದ್ದಿದ್ದಾನೆ. ಇದನ್ನು ಗಮನಿಸದ ಚಾಲಕ ಹಾಗೇ ಕಾರು ಚಲಾಯಿಸಿದ್ದು, ಕಾರಿನ ಮುಂದಿನ ಗಾಲಿ ಸಿಂಗಯ್ಯನ ತಲೆ ಮೇಲೆ ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಅಸುನೀಗಿದ್ದಾನೆ.
ಜೂನ್ 18ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಘಟನೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಗಳು ವ್ಯಕ್ತವಾಗುತ್ತಿವೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…