Categories: ಕೋಲಾರ

ಜನಗಣತಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕೇಂದ್ರ ಸರ್ಕಾರ ಜನಗಣತಿ ಜೊತೆಗೆ ಜಾತಿಗಣತಿ ಮಾಡಲು ತೆಗೆದುಕೊಂಡಿರುವ ನಿರ್ಧಾರವು ಒಳ್ಳೆಯದು. ದೇಶದಲ್ಲಿ ಯಾವ ಯಾವ ಸಮುದಾಯಗಳ ಜನಸಂಖ್ಯೆ ಎಷ್ಟಿದೆ ಇದೆ ಎಂಬುದು ತಿಳಿದುಕೊಂಡರೇ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದು ಕೇಂದ್ರ ಸರ್ಕಾರ ಜಾತಿಗಣತಿ ಮಾಡಲು ತೆಗೆದುಕೊಂಡ ನಿರ್ಧಾರವನ್ನು ಶಾಸಕ ಕೊತ್ತೂರು ಮಂಜುನಾಥ್ ಸ್ವಾಗತಿಸಿದರು.

ನಗರದ ತಮ್ಮ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಳ್ಳೆಯ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲು ಹೊರಟಿರುವುದು ಶ್ಲಾಘನೀಯ. ಈ ಹಿಂದೆ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರವರ ಅವಧಿಯಲ್ಲಿ ಜಾತಿಗಣತಿ ಮಾಡಿದ್ದರು, ಈಗ ಜಾತಿಗಣತಿ ಮುಂದಾಗಿದ್ದಾರೆ ಹತ್ತು ವರ್ಷಕ್ಕೊಮ್ಮೆ ಜಾತಿಗಣತಿ ಮಾಡುವುದು ಉತ್ತಮ ನಿರ್ಧಾರವಾಗಿದೆ ಎಂದು ತಿಳಿಸಿದರು.

ಪಹಲ್ಗಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸತ್ತವರು ನಮ್ಮ ಅಣ್ಣ ತಮ್ಮಂದಿರು, ಇದು ತುಂಬಾ ಘೋರವಾದ ವಿಚಾರ ಭಯೋತ್ಪಾದಕರು ದಾಳಿ ನಡೆಸಿ ಇಷ್ಟು ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸಮಂಜಸವಲ್ಲ, ಹಾಗಾಗಿ ಕೆಂದ್ರ ಸರ್ಕಾರ ಮೊದಲು ರಾಜಿನಾಮೆ ನೀಡುವುದು ಸೂಕ್ತ, ಸುಮ್ಮನೆ ಯುದ್ದ ವಿಮಾನಗಳನ್ನು ಆಕಾಶದಲ್ಲಿ ಚಾಲನೆ ಮಾಡಿಕೊಂಡು ದೇಶದ ಜನತೆಗೆ ನಾಟಕ ಪ್ರದರ್ಶನ ಮಾಡುತ್ತಿದ್ದಾರೆ ಅಷ್ಟೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ನಮ್ಮ ಜಾಗದಲ್ಲಿ ಬಂದು ಭಯೋತ್ಪಾದಕರು ನಮ್ಮ ಜನರ ಮೇಲೆ ದಾಳಿ ನಡೆಸಿ ಅಮಾಯಕ ೨೬ ಜನರನ್ನು ಬಲಿತೆಗೆದುಕೊಂಡರೂ ಕೇಂದ್ರ ಸರ್ಕಾರ ಈವರೆಗೂ ಯಾವುದೇ ದಿಟ್ಟ ನಿರ್ಧಾರ ಕೈಗೊಳ್ಳದಿರುವುದು ಅವರಿಗೆ ಶೋಭೆ ತರುವುದಿಲ್ಲ, ಭಯೋತ್ಪಾದಕರು ದಾಳಿ ನಡೆಸಿದ ತಕ್ಷಣ ಎಚ್ಚೆತ್ತುಕೊಂಡಿದ್ದರೆ ಅವರು ನಮ್ಮ ಸ್ಥಳದ ಒಳಗೆ ಸಿಗುತ್ತಿದ್ದರು. ಭಯೋತ್ಪದಕರ ದಾಳಿ ಕೇಂದ್ರ ಸರ್ಕಾರ ಗುಪ್ತಚರ ಇಲಾಖೆಯ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ ಎಂದರು.

ಭಯೋತ್ಪಾದಕರ ದಾಳಿ ನಡೆಸಿದ ತಕ್ಷಣ ಕೇಂದ್ರ ಸರ್ಕಾರ ನಮ್ಮ ದೇಶದಿಂದ ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅದು ಸಾಧ್ಯವೇ ಎಂದು ಪ್ರಶ್ನಿಸಿದರಲ್ಲದೆ ಸಿಂಧೂ ನದಿ ನೀರನ್ನು ನಿಲ್ಲಿಸಲು ಬೃಹತ್‌ ಅಣೆಕಟ್ಟು ಕಟ್ಟಬೇಕು ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಬೇರೊಂದು ಕಡೆ ಹರಿಸಲು ಲಕ್ಷಾಂತರ ರೂ ಅನುಧಾನ ಬೇಕು ಇದೆಲ್ಲಾ ಕೇಂದ್ರ ಸರ್ಕಾರದ ಗಿಮಿಕ್ ಹಾಗಿದೆ ದೇಶದ ಜನರನ್ನು ನಾವು ಸಿಂಧೂ ನದಿಯ ನೀರನ್ನು ನಿಲ್ಲಿಸಿದ್ದೇವೆ ಎಂದು ದೇಶದ ಜನರನ್ನು ಯಾಮಾರಿಸುತ್ತಿದೆ. ದೇಶದಿಂದ ಪಾಕಿಸ್ತಾನಕ್ಕೆ ರಪ್ತು ಆಗುವ ಔಷಧಿಗಳನ್ನು ನಿಲ್ಲಿಸಿದ್ದಲ್ಲಿ ಪಾಕಿಸ್ತಾನದಲ್ಲಿರುವ ಅರ್ಥದಷ್ಟು ಜನ ಮೂರು ದಿನದಲ್ಲಿ ಸಾಯುತ್ತಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ನಗರಸಭೆಯಲ್ಲಿ ಕೆಲ ಅಧಿಕಾರಿಗಳು ಕಳೆದ ಹತ್ತುವರ್ಷಗಳಿಂದ ಇಲ್ಲಿಯೇ ಬೇರೂರಿದ್ದು ಸಾಕಷ್ಟು ಅಕ್ರಮದಲ್ಲಿ ಪಾಲುದಾರರಾಗಿದ್ದಾರೆ ಅವರನ್ನೆಲ್ಲಾ ಬೇರೋಂದು ಜಿಲ್ಲೆಗೆ ವರ್ಗಾವಣೆ ಮಾಡಿ ಅಲ್ಲಿರುವವರನ್ನು ಕೋಲಾರಕ್ಕೆ ತರಬೇಕು ಎಂದು ಪ್ರಯತ್ನಗಳು ನಡೆಯುತ್ತಿವೆ ಆದರೆ ಕೋಲಾರ ನಗರಸಭೆಗೆ ಅಧಿಕಾರಿಗಳು ಬರಲು ಮುಂದಾಗುತ್ತಿಲ್ಲಾ ಉತ್ತಮವಾಗಿ ಜನರಿಗೆ ಸ್ಪಂದಿಸುವ ಅಧಿಕಾರಿಗಳು ಕೋಲಾರ ನಗರಸಭೆಗೆ ಬಂದರೆ ಅವರಿಗೆ ಸ್ವಾಗತಿಸಿ ಸಂಪೂರ್ಣ ಸಹಕಾರ ನೀಡುವುದಲ್ಲದೆ ಬರುವ ಅಂತಹ ಅಧಿಕಾರಿಗೆ ಉಚಿತವಾಗಿ ಒಂದು ದ್ವಿಚಕ್ರ ವಾಹನವನ್ನು ನೀಡಲಾಗುವುದು ಎಂದು ತಿಳಿಸಿದರು.

ಖಾದ್ರಿಪುರದಲ್ಲಿ ನಗರಸಭೆಗೆ ಸೇರಿದ ಜಾಗವನ್ನು ನಗರಸಭೆಗೆ ಸುಪ್ಪದ್ದಿಗೆಗೆ ಪಡೆಯಲು ಈಗಾಗಲೆ ಕ್ರಮ ವಹಿಸಲಾಗಿದೆ. ಕೋಲಾರ ತಹಶೀಲ್ದಾರ್, ಹಾಗೂ ಉಪವಿಭಾಗಾಧಿಕಾರಿಗೆ ಸೂಚನೆ ನೀಡಲಾಗಿದೆ ಅತಿ ಶೀಘ್ರದಲ್ಲೇ ದಾಖಲೆಗಳನ್ನು ತಿರುಚಿ ನಗರಸಭೆ ಆಸ್ತಿಯನ್ನು ಕಬಳಿಸಿರುವವರಿಂದ ನಗರಸಭೆ ಆಸ್ತಿಯಾಗಿ ವಾಪಸ್ ಪಡೆಯಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಮುಳಬಾಗಿಲು ಅಲ್ಲದೆ ಕೋಲಾರದಲ್ಲೂ ಐಪಿಎಲ್ ಬೆಟ್ಟಿಂಗ್ ದಂದೆ ನಡೆಯುತ್ತಿದೆ. ಬೆಟ್ಟಿಂಗ್ ದಂದೆಯಿಂದ ಎಷ್ಟೋ ಅಮಾಯಕರ ಯುವಕರು ಬಲಿಯಾಗಿದ್ದಾರೆ ಎಷ್ಟೋ ಕುಟುಂಬಗಳು ಸಹ ಬೀದಿಗೆ ಬಿದ್ದಿವೆ ಬೆಟ್ಟಿಂಗ್ ದಂದೆಯಿಂದ ದ್ವಿಚಕ್ರ ವಾಹನ ಮನೆ ಮಟ ಮಾರಿಕೊಂಡಿರುವ ಉದಾಹರಣೆಗಳೂ ಇವೆ. ಬೆಟ್ಟಿಂಗ್ ದಂದೆ ಕುರಿತು ಇಂಚಿಂಚು ಮಾಹಿತಿ ಪೋಲೀಸರಿಗೆ ಗೊತ್ತಿದೆ ಆದರೆ ಪೋಲೀಸರೆ ಅವರನ್ನು ಬಿಟ್ಟುಬಿಟ್ಟಿದ್ದಾರೆ ಪೋಲೀಸ್ ಇಲಾಖೆ ಕಾರ್ಯವೈಖರಿ ಬಗ್ಗೆ ಅಸಮಾಧಾನವನ್ನು ಹೊರಹಾಕಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮದ್ ಹನೀಫ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮುಖಂಡರಾದ ಕಠಾರಿಪಾಳ್ಯ ಅಮರ್, ಜಂಬಾಪುರ ವೆಂಕಟರಾಮ್, ಉರಟ ಅಗ್ರಹಾರ ಚೌಡರೆಡ್ಡಿ, ತಿಪ್ಪೇನಹಳ್ಳಿ ನಾಗೇಶ್, ಚಿನ್ನಾಪುರ ನಾರಾಯಣಸ್ವಾಮಿ, ಸಿಎಂಎಂ ಮಂಜುನಾಥ್, ಸೈಫ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

1 hour ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

3 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

4 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

5 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

6 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

12 hours ago