Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

13 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

13 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

13 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

16 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

23 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago