Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

14 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

20 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

23 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

24 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 day ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

1 day ago