Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 hour ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

23 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago