Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

19 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

1 day ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

1 day ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago