ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…