ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…