Categories: ಕೋಲಾರ

ಜನಗಣತಿಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಗೊಲ್ಲ ಎಂದು ಬರೆಸಲು ಶ್ರೀನಿವಾಸ್ ಯಾದವ್ ಮನವಿ

ಕೋಲಾರ: ರಾಜ್ಯದಲ್ಲಿ ನಡೆಯಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಗಣತಿಯ ನಮೂನೆಯ ಕ್ರಮ ಸಂಖ್ಯೆ 9 ಕಾಲಂನ ಜಾತಿಯಲ್ಲಿ ಗೊಲ್ಲ ಮತ್ತು ಉಪಜಾತಿಯಲ್ಲಿ ಶಾಲಾ ದಾಖಲೆಗಳಲ್ಲಿ ಇದ್ದಂತೆ ಬರೆಸುವ ಮೂಲಕ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ರಾಜ್ಯ ಯಾದವ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಲ್ಲಾ ಪ್ರತಿನಿಧಿ ಕೆ.ವಿ ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ ಅವರು‌ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಜಾತಿಯ ಕಾಲಂನಲ್ಲಿ ಗೊಲ್ಲ ಬರೆದು ಉಪಜಾತಿಯಲ್ಲಿ ಪ್ರತ್ಯೇಕವಾದ ವಿವರವನ್ನು ನಮೂದಿಸಬಾರದು ಗೊಲ್ಲ ಜಾತಿಯಲ್ಲಿ ಅನೇಕ ಉಪಜಾತಿಗಳನ್ನು ನಮೂದಿಸಲಾಗಿರುತ್ತದೆ. ಆದರೆ, ಮುಖ್ಯವಾದ ಜಾತಿ ಯಾವುದೆಂದು ಮನಗಂಡು, ಗೊಲ್ಲ ಎಂಬ ಜಾತಿಯನ್ನು ಮಾತ್ರ ಬರೆಯಿಸಬೇಕಿದೆ ಪ್ರತ್ಯೇಕ ಉಪಜಾತಿಗಳನ್ನು ಜಾತಿ ಕಾಲಂನಲ್ಲಿ ನಮೂದಿಸಿದಾಗ ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿ, ಮೀಸಲಾತಿ ಪ್ರಮಾಣ ಕಡಿಮೆಯಾಗುತ್ತದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ಅದರಿಂದಾಗಿ ಜಾತಿಯಲ್ಲಿ ಗೊಲ್ಲ ಮಾತ್ರ ಬರೆಸಬೇಕು ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆ 22 ರಿಂದ ಅ.7 ರವರೆಗೆ ಜಾತಿ ಗಣತಿ ಕೈಗೊಳ್ಳಲಾಗಿದೆ ಅಧಿಕಾರಿಗಳು ಮನೆ ಮನೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಗೊಲ್ಲ ಎಂದು ಬರೆಸುವುದರಿಂದ ರಾಜ್ಯ ಮಟ್ಟದಲ್ಲಿ ನಮ್ಮ ಜನಾಂಗದ ಜನಸಂಖ್ಯೆಯ ನಿಖರವಾದ ಮಾಹಿತಿ ಗೊತ್ತಾಗುತ್ತದೆ ಇದರಿಂದಾಗಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಲು ಅನುಕೂಲವಾಗುತ್ತದೆ ಎಂದು ಶ್ರೀನಿವಾಸ್ ಯಾದವ್ ಮನವಿ ಮಾಡಿದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

4 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago