Categories: ಕೋಲಾರ

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಸುರೇಶ್

ಕೋಲಾರ: ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು, ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಮುಖಗಳು ಇದ್ದಂತೆ. ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪಿ ಸುರೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಸುಮಾರು 75 ವರ್ಷಗಳಿಂದ ಅಧಿಕಾರದಲ್ಲಿ ಇದ್ದ ಪಕ್ಷಗಳಿಂದ ಇದುವರೆಗೂ ಬಡತನ ನಿರ್ಮೂಲನೆವಾಗಲಿಲ್ಲ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸರಕಾರಗಳು ಕಾಳಜಿ ವಹಿಸಲಿಲ್ಲ ಜನರ ನೆಮ್ಮದಿಯ ಬದುಕು ಅಕ್ಕ ಮಯಾವತಿ ಅವರ ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯವಿದ್ದು ಅನಿಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮೋದಿ ಸರಕಾರ ಬಂದ ನಂತರ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾನೂನನ್ನು ಜಾರಿಗೆ ಮಾಡಲು ಹೊರಟಿದ್ದಾರೆ ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿ ಬಂಡವಾಳಶಾಹಿಗಳ ಅಭಿವೃದ್ಧಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇವರುಗಳಿಂದ ದೇಶ ಎಂದಿಗೂ ಅಭಿವೃದ್ದಿಯಾಗದು. ಇಂತಹ ಪಕ್ಷಗಳನ್ನು ದೂರವಿಟ್ಟು ಬಡವರಿಗಾಗಿ ಶ್ರಮಿಸುತ್ತಿರುವ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ಧರ್ಮವನ್ನು ಸಹಿಷ್ಣುತೆಯಿಂದ ಕಾಣುತ್ತಿರುವ ಬಿ.ಎಸ್.ಪಿ. ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯಿಂದ ಗೆದ್ದ ಲೋಕಸಭಾ ಸದಸ್ಯರು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಕಾಳಜಿ ವಹಿಸಲಿಲ್ಲ ದೇವಸ್ಥಾನ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಹೊಡೆದು ಆಳುವ ನೀತಿಗಳನ್ನು ಅನುಸರಿಸಿದ್ದಾರೆ. ಜೆಡಿಎಸ್‌ ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ಈಗಾಗಲೇ ಈ ಮೂರು ಪಕ್ಷವನ್ನು ಗೆಲ್ಲಿಸಿ ನೋಡಿ­ದ್ದೀರಿ. ಅವರನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಿ ನನಗೆ ಒಂದು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಬಿ.ವಿ ನಾಗಪ್ಪ, ಸಂಯೋಜಕರಾದ ಮಧುಸೂದನ್, ರಮಣ್ ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಅಂಬರೀಶ್, ನಾರಾಯಣಸ್ವಾಮಿ ಇದ್ದರು

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago