ಕೋಲಾರ: ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು, ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಮುಖಗಳು ಇದ್ದಂತೆ. ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪಿ ಸುರೇಶ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಸುಮಾರು 75 ವರ್ಷಗಳಿಂದ ಅಧಿಕಾರದಲ್ಲಿ ಇದ್ದ ಪಕ್ಷಗಳಿಂದ ಇದುವರೆಗೂ ಬಡತನ ನಿರ್ಮೂಲನೆವಾಗಲಿಲ್ಲ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸರಕಾರಗಳು ಕಾಳಜಿ ವಹಿಸಲಿಲ್ಲ ಜನರ ನೆಮ್ಮದಿಯ ಬದುಕು ಅಕ್ಕ ಮಯಾವತಿ ಅವರ ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯವಿದ್ದು ಅನಿಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.
ದೇಶದಲ್ಲಿ ಮೋದಿ ಸರಕಾರ ಬಂದ ನಂತರ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾನೂನನ್ನು ಜಾರಿಗೆ ಮಾಡಲು ಹೊರಟಿದ್ದಾರೆ ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿ ಬಂಡವಾಳಶಾಹಿಗಳ ಅಭಿವೃದ್ಧಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇವರುಗಳಿಂದ ದೇಶ ಎಂದಿಗೂ ಅಭಿವೃದ್ದಿಯಾಗದು. ಇಂತಹ ಪಕ್ಷಗಳನ್ನು ದೂರವಿಟ್ಟು ಬಡವರಿಗಾಗಿ ಶ್ರಮಿಸುತ್ತಿರುವ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ಧರ್ಮವನ್ನು ಸಹಿಷ್ಣುತೆಯಿಂದ ಕಾಣುತ್ತಿರುವ ಬಿ.ಎಸ್.ಪಿ. ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಜಿಲ್ಲೆಯಿಂದ ಗೆದ್ದ ಲೋಕಸಭಾ ಸದಸ್ಯರು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಕಾಳಜಿ ವಹಿಸಲಿಲ್ಲ ದೇವಸ್ಥಾನ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಹೊಡೆದು ಆಳುವ ನೀತಿಗಳನ್ನು ಅನುಸರಿಸಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ಈಗಾಗಲೇ ಈ ಮೂರು ಪಕ್ಷವನ್ನು ಗೆಲ್ಲಿಸಿ ನೋಡಿದ್ದೀರಿ. ಅವರನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಿ ನನಗೆ ಒಂದು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಬಿ.ವಿ ನಾಗಪ್ಪ, ಸಂಯೋಜಕರಾದ ಮಧುಸೂದನ್, ರಮಣ್ ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಅಂಬರೀಶ್, ನಾರಾಯಣಸ್ವಾಮಿ ಇದ್ದರು
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…