Categories: ಕೋಲಾರ

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಸುರೇಶ್

ಕೋಲಾರ: ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು, ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಮುಖಗಳು ಇದ್ದಂತೆ. ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪಿ ಸುರೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಸುಮಾರು 75 ವರ್ಷಗಳಿಂದ ಅಧಿಕಾರದಲ್ಲಿ ಇದ್ದ ಪಕ್ಷಗಳಿಂದ ಇದುವರೆಗೂ ಬಡತನ ನಿರ್ಮೂಲನೆವಾಗಲಿಲ್ಲ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸರಕಾರಗಳು ಕಾಳಜಿ ವಹಿಸಲಿಲ್ಲ ಜನರ ನೆಮ್ಮದಿಯ ಬದುಕು ಅಕ್ಕ ಮಯಾವತಿ ಅವರ ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯವಿದ್ದು ಅನಿಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮೋದಿ ಸರಕಾರ ಬಂದ ನಂತರ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾನೂನನ್ನು ಜಾರಿಗೆ ಮಾಡಲು ಹೊರಟಿದ್ದಾರೆ ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿ ಬಂಡವಾಳಶಾಹಿಗಳ ಅಭಿವೃದ್ಧಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇವರುಗಳಿಂದ ದೇಶ ಎಂದಿಗೂ ಅಭಿವೃದ್ದಿಯಾಗದು. ಇಂತಹ ಪಕ್ಷಗಳನ್ನು ದೂರವಿಟ್ಟು ಬಡವರಿಗಾಗಿ ಶ್ರಮಿಸುತ್ತಿರುವ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ಧರ್ಮವನ್ನು ಸಹಿಷ್ಣುತೆಯಿಂದ ಕಾಣುತ್ತಿರುವ ಬಿ.ಎಸ್.ಪಿ. ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯಿಂದ ಗೆದ್ದ ಲೋಕಸಭಾ ಸದಸ್ಯರು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಕಾಳಜಿ ವಹಿಸಲಿಲ್ಲ ದೇವಸ್ಥಾನ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಹೊಡೆದು ಆಳುವ ನೀತಿಗಳನ್ನು ಅನುಸರಿಸಿದ್ದಾರೆ. ಜೆಡಿಎಸ್‌ ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ಈಗಾಗಲೇ ಈ ಮೂರು ಪಕ್ಷವನ್ನು ಗೆಲ್ಲಿಸಿ ನೋಡಿ­ದ್ದೀರಿ. ಅವರನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಿ ನನಗೆ ಒಂದು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಬಿ.ವಿ ನಾಗಪ್ಪ, ಸಂಯೋಜಕರಾದ ಮಧುಸೂದನ್, ರಮಣ್ ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಅಂಬರೀಶ್, ನಾರಾಯಣಸ್ವಾಮಿ ಇದ್ದರು

Ramesh Babu

Journalist

Recent Posts

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

4 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

13 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

19 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

21 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 days ago