Categories: ಕೋಲಾರ

ಜನತೆಯ ನೆಮ್ಮದಿ ಬದುಕಿಗೆ ಬಿಎಸ್ಪಿ ಬೆಂಬಲಿಸಿ: ಸುರೇಶ್

ಕೋಲಾರ: ಕಾಂಗ್ರೆಸ್, ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಬೇರೆ ಬೇರೆಯಾದರು ಅವರಲ್ಲಿನ ಸಿದ್ಧಾಂತಗಳು ಒಂದೇ ಆಗಿದ್ದು, ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ಒಂದೇ ನಾಣ್ಯದ ಮುಖಗಳು ಇದ್ದಂತೆ. ಅವುಗಳಿಂದ ಜನತೆಗೆ ಎಂದಿಗೂ ಒಳ್ಳೆಯದಾಗುವುದಿಲ್ಲ ಎಂದು ಕೋಲಾರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಪಿ ಸುರೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಸುಮಾರು 75 ವರ್ಷಗಳಿಂದ ಅಧಿಕಾರದಲ್ಲಿ ಇದ್ದ ಪಕ್ಷಗಳಿಂದ ಇದುವರೆಗೂ ಬಡತನ ನಿರ್ಮೂಲನೆವಾಗಲಿಲ್ಲ, ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸರಕಾರಗಳು ಕಾಳಜಿ ವಹಿಸಲಿಲ್ಲ ಜನರ ನೆಮ್ಮದಿಯ ಬದುಕು ಅಕ್ಕ ಮಯಾವತಿ ಅವರ ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯವಿದ್ದು ಅನಿಟ್ಟಿನಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಮೀಸಲು ಕ್ಷೇತ್ರದಲ್ಲಿ ನಾನು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ದೇಶದಲ್ಲಿ ಮೋದಿ ಸರಕಾರ ಬಂದ ನಂತರ ಕಾರ್ಪೊರೇಟ್ ಸಂಸ್ಥೆಗಳ ಪರವಾದ ಕಾನೂನನ್ನು ಜಾರಿಗೆ ಮಾಡಲು ಹೊರಟಿದ್ದಾರೆ ಸಾರ್ವಜನಿಕರ ತೆರಿಗೆ ಹಣವನ್ನು ಈ ರೀತಿ ಬಂಡವಾಳಶಾಹಿಗಳ ಅಭಿವೃದ್ಧಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ ಇವರುಗಳಿಂದ ದೇಶ ಎಂದಿಗೂ ಅಭಿವೃದ್ದಿಯಾಗದು. ಇಂತಹ ಪಕ್ಷಗಳನ್ನು ದೂರವಿಟ್ಟು ಬಡವರಿಗಾಗಿ ಶ್ರಮಿಸುತ್ತಿರುವ ಸಂವಿಧಾನ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲಾ ಧರ್ಮವನ್ನು ಸಹಿಷ್ಣುತೆಯಿಂದ ಕಾಣುತ್ತಿರುವ ಬಿ.ಎಸ್.ಪಿ. ಪಕ್ಷವನ್ನು ಬೆಂಬಲಿಸಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯಿಂದ ಗೆದ್ದ ಲೋಕಸಭಾ ಸದಸ್ಯರು ಜನರ ಬದುಕಿನ ಪ್ರಶ್ನೆಗಳ ಬಗ್ಗೆ ಕಾಳಜಿ ವಹಿಸಲಿಲ್ಲ ದೇವಸ್ಥಾನ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿಕೊಂಡು ಹೊಡೆದು ಆಳುವ ನೀತಿಗಳನ್ನು ಅನುಸರಿಸಿದ್ದಾರೆ. ಜೆಡಿಎಸ್‌ ಬಿಜೆಪಿ ಪಕ್ಷಗಳು ಮೈತ್ರಿಯಾಗಿದ್ದು ಈಗಾಗಲೇ ಈ ಮೂರು ಪಕ್ಷವನ್ನು ಗೆಲ್ಲಿಸಿ ನೋಡಿ­ದ್ದೀರಿ. ಅವರನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಿ ನನಗೆ ಒಂದು ಅವಕಾಶ ನೀಡಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಬಿ.ವಿ ನಾಗಪ್ಪ, ಸಂಯೋಜಕರಾದ ಮಧುಸೂದನ್, ರಮಣ್ ಕುಮಾರ್, ಮುಳಬಾಗಿಲು ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಅಂಬರೀಶ್, ನಾರಾಯಣಸ್ವಾಮಿ ಇದ್ದರು

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

1 hour ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

1 hour ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

3 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

4 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago