ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮಗೆ ಗೌರವ ಡಾಕ್ಟರೇಟ್

ದೊಡ್ಡಬಳ್ಳಾಪುರ : ಹದಿನೆಂಟು ವರ್ಷಗಳ ನಿರಂತರ ಕಲಾ ಸೇವೆ ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್  ರಿಸರ್ಚ್ ಯುನಿವರ್ಸಿಟಿಯು ಹಳ್ಳಿ ಪ್ರತಿಭೆ ಜನಪದ ಕಲಾವಿದೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತಂದಿದೆ ಎಂದು ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮ ತಿಳಿಸಿದ್ದಾರೆ.

ಸತತ 18 ವರ್ಷಗಳಿಂದ ಸೋಬಾನೇ ಪದ, ಭಜನೆ, ಭಕ್ತಿ ಗೀತೆ, ಚಿತ್ರಗೀತೆಗಳು ಸೇರಿದಂತೆ ಹಲವು ಬಗೆಯ ಹಾಡುಗಳನ್ನು ಊರೂರು ಸುತ್ತಿ ಹಾಡುತ್ತಾ ಬಂದಿದ್ದೇನೆ. ತಾನೂ ಹಾಡಿ, ಇತರರಿಗೂ ಕಲೆ ಕಲಿಸುತ್ತಿದ್ದೇನೆ ಎಂದರು.

ಕೌಟುಂಬಿಕ ಸಂಕಷ್ಟಗಳ ನಡುವೆಯೂ ಛಲ ಬಿಡದೆ ನಿರಂತರ ಕಲಾ ಸೇವೆಗೆ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಬಾಲ್ಯದಲ್ಲಿ ಬೇರೆಯವರು ಹಾಡುವಾಗ ನನಗೂ ಆಡಬೇಕು ಅನಿಸುತ್ತಿತ್ತು. ಹಾಗಾಗಿ, ಹಾಡುವುದನ್ನು ಕಲಿತೆ. ಇದಕ್ಕೆ ಮನೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದರು, ಛಲ ಬಿಡದೆ ನನ್ನದೇ ಸ್ವಂತ ತಂಡವನ್ನು ಕಟ್ಟಿಕೊಂಡು ಹಲವಾರು ಹಾಡಿನ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಇಂದು ನಾನು ಮಾಡಿರುವ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇದರಿಂದ ಸಂತಸ ತಂದಿದೆ. ಮುಂದೆ ನನ್ನಂತೆ ನನ್ನ ತಂಡದವರು ಸಹ ಡಾಕ್ಟರೇಟ್ ಪಡೆಯುವ ಮಟ್ಟಕ್ಕೆ ಬೆಳೆಯಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಕಲಾವಿದೆ ಪಾರ್ವತಮ್ಮ ಹೇಳಿದ್ದಾರೆ.

ಇಂದಿನ ಮಕ್ಕಳು ಕೇವಲ ಮೊಬೈಲ್ ಗೆ ಸೀಮಿತರಾಗಿದ್ದಾರೆ. ಅವರನ್ನು ಇಂತಹ ಜನಪದ ಕಲೆಗಳತ್ತ ಸೆಳೆಯುವ ನಿಟ್ಟಿನಲ್ಲಿ ತರಬೇತಿ ಕೊಡಿಸುವ ಉದ್ದೇಶ ನನ್ನದು. ಹಾಗಾಗಿ, ಮನೆಯಲ್ಲಿ ಅಗತ್ಯವಿರುವ ಸಂಗೀತ ವಾದ್ಯಗಳನ್ನು  ಪರಿಣಿತಿ ಪಡೆದಿರುವ ಶಿಕ್ಷಕರನ್ನು ನೇಮಿಸುವ ಮೂಲಕ  ಮಕ್ಕಳಿಗೆ ಸಂಗೀತ ಹೇಳಿ ಕೊಡಲು ಮುಂದಾಗಿದ್ದೇವೆ  ಎಂದಿದ್ದಾರೆ.

ಕಲಾವಿದ ಅರುಣ್ ಮಾತನಾಡಿ, ಯಾವುದೇ ಅಪೇಕ್ಷೆ ಇಲ್ಲದೆ ಕೇವಲ ಜನಪದ ಸಾಹಿತ್ಯವನ್ನು ಉಳಿಸುವ ನಿಟ್ಟಿನಲ್ಲಿ ನಿತ್ಯ ನಿರಂತರ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ನಮ್ಮ ತಾಯಿಯವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತಸದ ವಿಷಯವಾಗಿದೆ. ಈ ಗೌರವ ಡಾಕ್ಟರೇಟ್ ಪದವಿ ನಾವು ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಿಸಲು ಶಕ್ತಿ ತುಂಬಿದೆ. ಕಲಾವಿದರನ್ನು ಬೆಳೆಸಿ ಹಾರೈಸುವ ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ. ಮೂಲ ಜನಪದ ಉಳಿಯಲಿ ಎಂದು ತಿಳಿಸಿದರು.

ನಮ್ಮ ತಂಡದಲ್ಲಿ ( ಪಾರ್ವತಮ್ಮ, ಒಬ್ಬಮ್ಮ,ಮುನಿಯಮ್ಮ, ನರಸಮ್ಮ, ಅರ್ಚನಾ, ರಾಜಮ್ಮ, ಕಮಲಮ್ಮ, ರತ್ನಮ್ಮ )   12ಕ್ಕೂ ಹೆಚ್ಚು ಮಂದಿ ಗಾಯಕರಿದ್ದು, ಸರ್ಕಾರಿ ಹಾಗೂ ಇತರೆ ಸೌಲಭ್ಯಗಳ ಕೊರತೆಯಿಂದ ಸೂಕ್ತ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ಜನಪದ ಕಲಾವಿದರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಮೂಲಕ  ಜನಪದ ಉಳಿವಿಗೆ ಸಹಕರಿಸಬೇಕಿದೆ ಎಂದು‌‌ ಕೋರಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

10 minutes ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 hour ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago