ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮಗೆ ಗೌರವ ಡಾಕ್ಟರೇಟ್

ದೊಡ್ಡಬಳ್ಳಾಪುರ : ಹದಿನೆಂಟು ವರ್ಷಗಳ ನಿರಂತರ ಕಲಾ ಸೇವೆ ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್  ರಿಸರ್ಚ್ ಯುನಿವರ್ಸಿಟಿಯು ಹಳ್ಳಿ ಪ್ರತಿಭೆ ಜನಪದ ಕಲಾವಿದೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತಂದಿದೆ ಎಂದು ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮ ತಿಳಿಸಿದ್ದಾರೆ.

ಸತತ 18 ವರ್ಷಗಳಿಂದ ಸೋಬಾನೇ ಪದ, ಭಜನೆ, ಭಕ್ತಿ ಗೀತೆ, ಚಿತ್ರಗೀತೆಗಳು ಸೇರಿದಂತೆ ಹಲವು ಬಗೆಯ ಹಾಡುಗಳನ್ನು ಊರೂರು ಸುತ್ತಿ ಹಾಡುತ್ತಾ ಬಂದಿದ್ದೇನೆ. ತಾನೂ ಹಾಡಿ, ಇತರರಿಗೂ ಕಲೆ ಕಲಿಸುತ್ತಿದ್ದೇನೆ ಎಂದರು.

ಕೌಟುಂಬಿಕ ಸಂಕಷ್ಟಗಳ ನಡುವೆಯೂ ಛಲ ಬಿಡದೆ ನಿರಂತರ ಕಲಾ ಸೇವೆಗೆ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಬಾಲ್ಯದಲ್ಲಿ ಬೇರೆಯವರು ಹಾಡುವಾಗ ನನಗೂ ಆಡಬೇಕು ಅನಿಸುತ್ತಿತ್ತು. ಹಾಗಾಗಿ, ಹಾಡುವುದನ್ನು ಕಲಿತೆ. ಇದಕ್ಕೆ ಮನೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದರು, ಛಲ ಬಿಡದೆ ನನ್ನದೇ ಸ್ವಂತ ತಂಡವನ್ನು ಕಟ್ಟಿಕೊಂಡು ಹಲವಾರು ಹಾಡಿನ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಇಂದು ನಾನು ಮಾಡಿರುವ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇದರಿಂದ ಸಂತಸ ತಂದಿದೆ. ಮುಂದೆ ನನ್ನಂತೆ ನನ್ನ ತಂಡದವರು ಸಹ ಡಾಕ್ಟರೇಟ್ ಪಡೆಯುವ ಮಟ್ಟಕ್ಕೆ ಬೆಳೆಯಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಕಲಾವಿದೆ ಪಾರ್ವತಮ್ಮ ಹೇಳಿದ್ದಾರೆ.

ಇಂದಿನ ಮಕ್ಕಳು ಕೇವಲ ಮೊಬೈಲ್ ಗೆ ಸೀಮಿತರಾಗಿದ್ದಾರೆ. ಅವರನ್ನು ಇಂತಹ ಜನಪದ ಕಲೆಗಳತ್ತ ಸೆಳೆಯುವ ನಿಟ್ಟಿನಲ್ಲಿ ತರಬೇತಿ ಕೊಡಿಸುವ ಉದ್ದೇಶ ನನ್ನದು. ಹಾಗಾಗಿ, ಮನೆಯಲ್ಲಿ ಅಗತ್ಯವಿರುವ ಸಂಗೀತ ವಾದ್ಯಗಳನ್ನು  ಪರಿಣಿತಿ ಪಡೆದಿರುವ ಶಿಕ್ಷಕರನ್ನು ನೇಮಿಸುವ ಮೂಲಕ  ಮಕ್ಕಳಿಗೆ ಸಂಗೀತ ಹೇಳಿ ಕೊಡಲು ಮುಂದಾಗಿದ್ದೇವೆ  ಎಂದಿದ್ದಾರೆ.

ಕಲಾವಿದ ಅರುಣ್ ಮಾತನಾಡಿ, ಯಾವುದೇ ಅಪೇಕ್ಷೆ ಇಲ್ಲದೆ ಕೇವಲ ಜನಪದ ಸಾಹಿತ್ಯವನ್ನು ಉಳಿಸುವ ನಿಟ್ಟಿನಲ್ಲಿ ನಿತ್ಯ ನಿರಂತರ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ನಮ್ಮ ತಾಯಿಯವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತಸದ ವಿಷಯವಾಗಿದೆ. ಈ ಗೌರವ ಡಾಕ್ಟರೇಟ್ ಪದವಿ ನಾವು ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಿಸಲು ಶಕ್ತಿ ತುಂಬಿದೆ. ಕಲಾವಿದರನ್ನು ಬೆಳೆಸಿ ಹಾರೈಸುವ ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ. ಮೂಲ ಜನಪದ ಉಳಿಯಲಿ ಎಂದು ತಿಳಿಸಿದರು.

ನಮ್ಮ ತಂಡದಲ್ಲಿ ( ಪಾರ್ವತಮ್ಮ, ಒಬ್ಬಮ್ಮ,ಮುನಿಯಮ್ಮ, ನರಸಮ್ಮ, ಅರ್ಚನಾ, ರಾಜಮ್ಮ, ಕಮಲಮ್ಮ, ರತ್ನಮ್ಮ )   12ಕ್ಕೂ ಹೆಚ್ಚು ಮಂದಿ ಗಾಯಕರಿದ್ದು, ಸರ್ಕಾರಿ ಹಾಗೂ ಇತರೆ ಸೌಲಭ್ಯಗಳ ಕೊರತೆಯಿಂದ ಸೂಕ್ತ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ಜನಪದ ಕಲಾವಿದರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಮೂಲಕ  ಜನಪದ ಉಳಿವಿಗೆ ಸಹಕರಿಸಬೇಕಿದೆ ಎಂದು‌‌ ಕೋರಿದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

10 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 day ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago