ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮಗೆ ಗೌರವ ಡಾಕ್ಟರೇಟ್

ದೊಡ್ಡಬಳ್ಳಾಪುರ : ಹದಿನೆಂಟು ವರ್ಷಗಳ ನಿರಂತರ ಕಲಾ ಸೇವೆ ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್  ರಿಸರ್ಚ್ ಯುನಿವರ್ಸಿಟಿಯು ಹಳ್ಳಿ ಪ್ರತಿಭೆ ಜನಪದ ಕಲಾವಿದೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿರುವುದು ಸಂತಸ ತಂದಿದೆ ಎಂದು ಜನಪದ ಕಲಾವಿದೆ ನಾಗಸಂದ್ರ ಪಾರ್ವತಮ್ಮ ತಿಳಿಸಿದ್ದಾರೆ.

ಸತತ 18 ವರ್ಷಗಳಿಂದ ಸೋಬಾನೇ ಪದ, ಭಜನೆ, ಭಕ್ತಿ ಗೀತೆ, ಚಿತ್ರಗೀತೆಗಳು ಸೇರಿದಂತೆ ಹಲವು ಬಗೆಯ ಹಾಡುಗಳನ್ನು ಊರೂರು ಸುತ್ತಿ ಹಾಡುತ್ತಾ ಬಂದಿದ್ದೇನೆ. ತಾನೂ ಹಾಡಿ, ಇತರರಿಗೂ ಕಲೆ ಕಲಿಸುತ್ತಿದ್ದೇನೆ ಎಂದರು.

ಕೌಟುಂಬಿಕ ಸಂಕಷ್ಟಗಳ ನಡುವೆಯೂ ಛಲ ಬಿಡದೆ ನಿರಂತರ ಕಲಾ ಸೇವೆಗೆ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ಬಾಲ್ಯದಲ್ಲಿ ಬೇರೆಯವರು ಹಾಡುವಾಗ ನನಗೂ ಆಡಬೇಕು ಅನಿಸುತ್ತಿತ್ತು. ಹಾಗಾಗಿ, ಹಾಡುವುದನ್ನು ಕಲಿತೆ. ಇದಕ್ಕೆ ಮನೆಯಲ್ಲಿ ನಿರಂತರ ವಿರೋಧ ವ್ಯಕ್ತವಾಗುತ್ತಿದ್ದರು, ಛಲ ಬಿಡದೆ ನನ್ನದೇ ಸ್ವಂತ ತಂಡವನ್ನು ಕಟ್ಟಿಕೊಂಡು ಹಲವಾರು ಹಾಡಿನ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಇಂದು ನಾನು ಮಾಡಿರುವ ಸೇವೆಯನ್ನು ಗುರುತಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಇದರಿಂದ ಸಂತಸ ತಂದಿದೆ. ಮುಂದೆ ನನ್ನಂತೆ ನನ್ನ ತಂಡದವರು ಸಹ ಡಾಕ್ಟರೇಟ್ ಪಡೆಯುವ ಮಟ್ಟಕ್ಕೆ ಬೆಳೆಯಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಕಲಾವಿದೆ ಪಾರ್ವತಮ್ಮ ಹೇಳಿದ್ದಾರೆ.

ಇಂದಿನ ಮಕ್ಕಳು ಕೇವಲ ಮೊಬೈಲ್ ಗೆ ಸೀಮಿತರಾಗಿದ್ದಾರೆ. ಅವರನ್ನು ಇಂತಹ ಜನಪದ ಕಲೆಗಳತ್ತ ಸೆಳೆಯುವ ನಿಟ್ಟಿನಲ್ಲಿ ತರಬೇತಿ ಕೊಡಿಸುವ ಉದ್ದೇಶ ನನ್ನದು. ಹಾಗಾಗಿ, ಮನೆಯಲ್ಲಿ ಅಗತ್ಯವಿರುವ ಸಂಗೀತ ವಾದ್ಯಗಳನ್ನು  ಪರಿಣಿತಿ ಪಡೆದಿರುವ ಶಿಕ್ಷಕರನ್ನು ನೇಮಿಸುವ ಮೂಲಕ  ಮಕ್ಕಳಿಗೆ ಸಂಗೀತ ಹೇಳಿ ಕೊಡಲು ಮುಂದಾಗಿದ್ದೇವೆ  ಎಂದಿದ್ದಾರೆ.

ಕಲಾವಿದ ಅರುಣ್ ಮಾತನಾಡಿ, ಯಾವುದೇ ಅಪೇಕ್ಷೆ ಇಲ್ಲದೆ ಕೇವಲ ಜನಪದ ಸಾಹಿತ್ಯವನ್ನು ಉಳಿಸುವ ನಿಟ್ಟಿನಲ್ಲಿ ನಿತ್ಯ ನಿರಂತರ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆಯನ್ನು ಗುರುತಿಸಿ ನಮ್ಮ ತಾಯಿಯವರಿಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತಸದ ವಿಷಯವಾಗಿದೆ. ಈ ಗೌರವ ಡಾಕ್ಟರೇಟ್ ಪದವಿ ನಾವು ಮತ್ತಷ್ಟು ಹೆಚ್ಚಿನ ಕೆಲಸ ನಿರ್ವಹಿಸಲು ಶಕ್ತಿ ತುಂಬಿದೆ. ಕಲಾವಿದರನ್ನು ಬೆಳೆಸಿ ಹಾರೈಸುವ ಇಂತಹ ಸಂಸ್ಥೆಗಳು ಮತ್ತಷ್ಟು ಹೆಚ್ಚಾಗಲಿ. ಮೂಲ ಜನಪದ ಉಳಿಯಲಿ ಎಂದು ತಿಳಿಸಿದರು.

ನಮ್ಮ ತಂಡದಲ್ಲಿ ( ಪಾರ್ವತಮ್ಮ, ಒಬ್ಬಮ್ಮ,ಮುನಿಯಮ್ಮ, ನರಸಮ್ಮ, ಅರ್ಚನಾ, ರಾಜಮ್ಮ, ಕಮಲಮ್ಮ, ರತ್ನಮ್ಮ )   12ಕ್ಕೂ ಹೆಚ್ಚು ಮಂದಿ ಗಾಯಕರಿದ್ದು, ಸರ್ಕಾರಿ ಹಾಗೂ ಇತರೆ ಸೌಲಭ್ಯಗಳ ಕೊರತೆಯಿಂದ ಸೂಕ್ತ ಅಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ಜನಪದ ಕಲಾವಿದರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ಮೂಲಕ  ಜನಪದ ಉಳಿವಿಗೆ ಸಹಕರಿಸಬೇಕಿದೆ ಎಂದು‌‌ ಕೋರಿದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago