‘ಜನಪದ ಕಲೆಗಳನ್ನು ಅರಿತರಷ್ಟೇ ಇತರೆ ಕಲಾ ಪ್ರಕಾರ ಅರ್ಥವಾಗೋದು’-ಕಲಾವಿದೆ ಲಲಿತಾ

ಎಲ್ಲಾ ಕಲೆಗಳ ಮೂಲ ಬೇರಿನಂತೆ ಇರುವ ಜನಪದ ಕಲೆಗಳನ್ನು ಅರಿತುಕೊಂಡರಷ್ಟೇ ನಮ್ಮ ಇತರೆ ಕಲಾ ಪ್ರಕಾರಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ಲಲಿತಾ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದಯ ಜಾನಪದ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಜಾನಪದ ಕಲಾ ಸಂಭ್ರಮ-2022 ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾ ಪ್ರಕಾರಗಳಲ್ಲಿನ ಪಟದ ಕುಣಿತ, ಕೋಲಾಟ, ಕಂಸಾಳೆ ಸೇರಿದಂತೆ ಹಲವಾರು ನೃತ್ಯಗಳನ್ನು ನೋಡುತ್ತಿದ್ದಂತೆ ಯಾರೊಬ್ಬರು ಸುಮ್ಮನೆ ನಿಲ್ಲಲು ಸಾಧ್ಯವೇ ಇಲ್ಲ. ತಾವು ಅವರೊಂದಿಗೆ ಕುಣಿಯ ಬೇಕು ಎನ್ನುವಂತಹ ಉತ್ಸಾಹ ಮನಸ್ಸಿನಲ್ಲಿ ಮೂಡುತ್ತದೆ.ಇದು ನಮ್ಮ ಜಾನಪದ ಕಲೆಗೆ ಇರುವ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜನಪದ ಕಲಾ ಪ್ರಕಾರಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯುವ ಸಮುದಾಯಕ್ಕೆ ಇವುಗಳನ್ನು ಪರಿಚಯಿಸುವ ಕೆಲಸ ಶ್ಲಾಘನೀಯ ಎಂದರು.

ಶಾಸ್ತ್ರೀಯ ಕಲಾ ಪ್ರಕಾರಗಳ ಶಿಸ್ತು ಬದ್ಧ ಕಲಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಜಾನಪದ ಕಲಾ ಪ್ರಕಾರಗಳ ಕಲಿಗೂ ನೀಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಉದಯ ಜಾನಪದ ಕಲಾ ಸಂಘದ ಕಾರ್ಯದರ್ಶಿ ಎಚ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವ ಕಾರ್ಯದರ್ಶಿ ಎ.ಜಯರಾಮ್, ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಸಿ.ರಾಮಚಂದ್ರಯ್ಯ,ಎಂ.ಎಸ್.ಸುರೇಶ್ಕುಮಾರ್,ಡಾ.ಪ್ರಕಾಶ್, ಕೆ.ಎಸ್.ಸಂದ್ಯಾರಾಣಿ,ಡಾ.ಎಂ.ಸತೀಶ್, ಜಿ.ಶ್ರಿನಿವಾಸ್ ಇದ್ದರು.

ವಿವಿಧ ಜಾನಪದ ಕಲಾ ತಂಡಗಳು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago