‘ಜನಪದ ಕಲೆಗಳನ್ನು ಅರಿತರಷ್ಟೇ ಇತರೆ ಕಲಾ ಪ್ರಕಾರ ಅರ್ಥವಾಗೋದು’-ಕಲಾವಿದೆ ಲಲಿತಾ

ಎಲ್ಲಾ ಕಲೆಗಳ ಮೂಲ ಬೇರಿನಂತೆ ಇರುವ ಜನಪದ ಕಲೆಗಳನ್ನು ಅರಿತುಕೊಂಡರಷ್ಟೇ ನಮ್ಮ ಇತರೆ ಕಲಾ ಪ್ರಕಾರಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ಲಲಿತಾ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದಯ ಜಾನಪದ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಜಾನಪದ ಕಲಾ ಸಂಭ್ರಮ-2022 ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾ ಪ್ರಕಾರಗಳಲ್ಲಿನ ಪಟದ ಕುಣಿತ, ಕೋಲಾಟ, ಕಂಸಾಳೆ ಸೇರಿದಂತೆ ಹಲವಾರು ನೃತ್ಯಗಳನ್ನು ನೋಡುತ್ತಿದ್ದಂತೆ ಯಾರೊಬ್ಬರು ಸುಮ್ಮನೆ ನಿಲ್ಲಲು ಸಾಧ್ಯವೇ ಇಲ್ಲ. ತಾವು ಅವರೊಂದಿಗೆ ಕುಣಿಯ ಬೇಕು ಎನ್ನುವಂತಹ ಉತ್ಸಾಹ ಮನಸ್ಸಿನಲ್ಲಿ ಮೂಡುತ್ತದೆ.ಇದು ನಮ್ಮ ಜಾನಪದ ಕಲೆಗೆ ಇರುವ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜನಪದ ಕಲಾ ಪ್ರಕಾರಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯುವ ಸಮುದಾಯಕ್ಕೆ ಇವುಗಳನ್ನು ಪರಿಚಯಿಸುವ ಕೆಲಸ ಶ್ಲಾಘನೀಯ ಎಂದರು.

ಶಾಸ್ತ್ರೀಯ ಕಲಾ ಪ್ರಕಾರಗಳ ಶಿಸ್ತು ಬದ್ಧ ಕಲಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಜಾನಪದ ಕಲಾ ಪ್ರಕಾರಗಳ ಕಲಿಗೂ ನೀಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಉದಯ ಜಾನಪದ ಕಲಾ ಸಂಘದ ಕಾರ್ಯದರ್ಶಿ ಎಚ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವ ಕಾರ್ಯದರ್ಶಿ ಎ.ಜಯರಾಮ್, ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಸಿ.ರಾಮಚಂದ್ರಯ್ಯ,ಎಂ.ಎಸ್.ಸುರೇಶ್ಕುಮಾರ್,ಡಾ.ಪ್ರಕಾಶ್, ಕೆ.ಎಸ್.ಸಂದ್ಯಾರಾಣಿ,ಡಾ.ಎಂ.ಸತೀಶ್, ಜಿ.ಶ್ರಿನಿವಾಸ್ ಇದ್ದರು.

ವಿವಿಧ ಜಾನಪದ ಕಲಾ ತಂಡಗಳು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago