‘ಜನಪದ ಕಲೆಗಳನ್ನು ಅರಿತರಷ್ಟೇ ಇತರೆ ಕಲಾ ಪ್ರಕಾರ ಅರ್ಥವಾಗೋದು’-ಕಲಾವಿದೆ ಲಲಿತಾ

ಎಲ್ಲಾ ಕಲೆಗಳ ಮೂಲ ಬೇರಿನಂತೆ ಇರುವ ಜನಪದ ಕಲೆಗಳನ್ನು ಅರಿತುಕೊಂಡರಷ್ಟೇ ನಮ್ಮ ಇತರೆ ಕಲಾ ಪ್ರಕಾರಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ಲಲಿತಾ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದಯ ಜಾನಪದ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಜಾನಪದ ಕಲಾ ಸಂಭ್ರಮ-2022 ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾ ಪ್ರಕಾರಗಳಲ್ಲಿನ ಪಟದ ಕುಣಿತ, ಕೋಲಾಟ, ಕಂಸಾಳೆ ಸೇರಿದಂತೆ ಹಲವಾರು ನೃತ್ಯಗಳನ್ನು ನೋಡುತ್ತಿದ್ದಂತೆ ಯಾರೊಬ್ಬರು ಸುಮ್ಮನೆ ನಿಲ್ಲಲು ಸಾಧ್ಯವೇ ಇಲ್ಲ. ತಾವು ಅವರೊಂದಿಗೆ ಕುಣಿಯ ಬೇಕು ಎನ್ನುವಂತಹ ಉತ್ಸಾಹ ಮನಸ್ಸಿನಲ್ಲಿ ಮೂಡುತ್ತದೆ.ಇದು ನಮ್ಮ ಜಾನಪದ ಕಲೆಗೆ ಇರುವ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜನಪದ ಕಲಾ ಪ್ರಕಾರಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯುವ ಸಮುದಾಯಕ್ಕೆ ಇವುಗಳನ್ನು ಪರಿಚಯಿಸುವ ಕೆಲಸ ಶ್ಲಾಘನೀಯ ಎಂದರು.

ಶಾಸ್ತ್ರೀಯ ಕಲಾ ಪ್ರಕಾರಗಳ ಶಿಸ್ತು ಬದ್ಧ ಕಲಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಜಾನಪದ ಕಲಾ ಪ್ರಕಾರಗಳ ಕಲಿಗೂ ನೀಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಉದಯ ಜಾನಪದ ಕಲಾ ಸಂಘದ ಕಾರ್ಯದರ್ಶಿ ಎಚ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವ ಕಾರ್ಯದರ್ಶಿ ಎ.ಜಯರಾಮ್, ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಸಿ.ರಾಮಚಂದ್ರಯ್ಯ,ಎಂ.ಎಸ್.ಸುರೇಶ್ಕುಮಾರ್,ಡಾ.ಪ್ರಕಾಶ್, ಕೆ.ಎಸ್.ಸಂದ್ಯಾರಾಣಿ,ಡಾ.ಎಂ.ಸತೀಶ್, ಜಿ.ಶ್ರಿನಿವಾಸ್ ಇದ್ದರು.

ವಿವಿಧ ಜಾನಪದ ಕಲಾ ತಂಡಗಳು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

20 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago