‘ಜನಪದ ಕಲೆಗಳನ್ನು ಅರಿತರಷ್ಟೇ ಇತರೆ ಕಲಾ ಪ್ರಕಾರ ಅರ್ಥವಾಗೋದು’-ಕಲಾವಿದೆ ಲಲಿತಾ

ಎಲ್ಲಾ ಕಲೆಗಳ ಮೂಲ ಬೇರಿನಂತೆ ಇರುವ ಜನಪದ ಕಲೆಗಳನ್ನು ಅರಿತುಕೊಂಡರಷ್ಟೇ ನಮ್ಮ ಇತರೆ ಕಲಾ ಪ್ರಕಾರಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ಲಲಿತಾ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದಯ ಜಾನಪದ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಜಾನಪದ ಕಲಾ ಸಂಭ್ರಮ-2022 ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾ ಪ್ರಕಾರಗಳಲ್ಲಿನ ಪಟದ ಕುಣಿತ, ಕೋಲಾಟ, ಕಂಸಾಳೆ ಸೇರಿದಂತೆ ಹಲವಾರು ನೃತ್ಯಗಳನ್ನು ನೋಡುತ್ತಿದ್ದಂತೆ ಯಾರೊಬ್ಬರು ಸುಮ್ಮನೆ ನಿಲ್ಲಲು ಸಾಧ್ಯವೇ ಇಲ್ಲ. ತಾವು ಅವರೊಂದಿಗೆ ಕುಣಿಯ ಬೇಕು ಎನ್ನುವಂತಹ ಉತ್ಸಾಹ ಮನಸ್ಸಿನಲ್ಲಿ ಮೂಡುತ್ತದೆ.ಇದು ನಮ್ಮ ಜಾನಪದ ಕಲೆಗೆ ಇರುವ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜನಪದ ಕಲಾ ಪ್ರಕಾರಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯುವ ಸಮುದಾಯಕ್ಕೆ ಇವುಗಳನ್ನು ಪರಿಚಯಿಸುವ ಕೆಲಸ ಶ್ಲಾಘನೀಯ ಎಂದರು.

ಶಾಸ್ತ್ರೀಯ ಕಲಾ ಪ್ರಕಾರಗಳ ಶಿಸ್ತು ಬದ್ಧ ಕಲಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಜಾನಪದ ಕಲಾ ಪ್ರಕಾರಗಳ ಕಲಿಗೂ ನೀಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಉದಯ ಜಾನಪದ ಕಲಾ ಸಂಘದ ಕಾರ್ಯದರ್ಶಿ ಎಚ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವ ಕಾರ್ಯದರ್ಶಿ ಎ.ಜಯರಾಮ್, ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಸಿ.ರಾಮಚಂದ್ರಯ್ಯ,ಎಂ.ಎಸ್.ಸುರೇಶ್ಕುಮಾರ್,ಡಾ.ಪ್ರಕಾಶ್, ಕೆ.ಎಸ್.ಸಂದ್ಯಾರಾಣಿ,ಡಾ.ಎಂ.ಸತೀಶ್, ಜಿ.ಶ್ರಿನಿವಾಸ್ ಇದ್ದರು.

ವಿವಿಧ ಜಾನಪದ ಕಲಾ ತಂಡಗಳು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

10 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

13 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

2 days ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago