‘ಜನಪದ ಕಲೆಗಳನ್ನು ಅರಿತರಷ್ಟೇ ಇತರೆ ಕಲಾ ಪ್ರಕಾರ ಅರ್ಥವಾಗೋದು’-ಕಲಾವಿದೆ ಲಲಿತಾ

ಎಲ್ಲಾ ಕಲೆಗಳ ಮೂಲ ಬೇರಿನಂತೆ ಇರುವ ಜನಪದ ಕಲೆಗಳನ್ನು ಅರಿತುಕೊಂಡರಷ್ಟೇ ನಮ್ಮ ಇತರೆ ಕಲಾ ಪ್ರಕಾರಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂದು ಚಲನಚಿತ್ರ ಹಾಗೂ ಕಿರುತೆರೆ ಕಲಾವಿದೆ ಲಲಿತಾ ಅವರು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದಯ ಜಾನಪದ ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಜಾನಪದ ಕಲಾ ಸಂಭ್ರಮ-2022 ಉದ್ಘಾಟಿಸಿ ಮಾತನಾಡಿದರು.

ಜಾನಪದ ಕಲಾ ಪ್ರಕಾರಗಳಲ್ಲಿನ ಪಟದ ಕುಣಿತ, ಕೋಲಾಟ, ಕಂಸಾಳೆ ಸೇರಿದಂತೆ ಹಲವಾರು ನೃತ್ಯಗಳನ್ನು ನೋಡುತ್ತಿದ್ದಂತೆ ಯಾರೊಬ್ಬರು ಸುಮ್ಮನೆ ನಿಲ್ಲಲು ಸಾಧ್ಯವೇ ಇಲ್ಲ. ತಾವು ಅವರೊಂದಿಗೆ ಕುಣಿಯ ಬೇಕು ಎನ್ನುವಂತಹ ಉತ್ಸಾಹ ಮನಸ್ಸಿನಲ್ಲಿ ಮೂಡುತ್ತದೆ.ಇದು ನಮ್ಮ ಜಾನಪದ ಕಲೆಗೆ ಇರುವ ಶಕ್ತಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್.ಶ್ರೀನಿವಾಸಯ್ಯ ಮಾತನಾಡಿ, ಆಧುನಿಕ ಮಾಧ್ಯಮಗಳ ಭರಾಟೆಯಲ್ಲಿ ಜನಪದ ಕಲಾ ಪ್ರಕಾರಗಳು ನೇಪಥ್ಯಕ್ಕೆ ಸರಿಯುತ್ತಿವೆ. ಯುವ ಸಮುದಾಯಕ್ಕೆ ಇವುಗಳನ್ನು ಪರಿಚಯಿಸುವ ಕೆಲಸ ಶ್ಲಾಘನೀಯ ಎಂದರು.

ಶಾಸ್ತ್ರೀಯ ಕಲಾ ಪ್ರಕಾರಗಳ ಶಿಸ್ತು ಬದ್ಧ ಕಲಿಗೆ ನೀಡುವಷ್ಟೇ ಪ್ರಾಮುಖ್ಯತೆಯನ್ನು ಜಾನಪದ ಕಲಾ ಪ್ರಕಾರಗಳ ಕಲಿಗೂ ನೀಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ತಿಳಿಸಿದರು.

ಸಮಾರಂಭದಲ್ಲಿ ಉದಯ ಜಾನಪದ ಕಲಾ ಸಂಘದ ಕಾರ್ಯದರ್ಶಿ ಎಚ್.ಕೃಷ್ಣಪ್ಪ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವ ಕಾರ್ಯದರ್ಶಿ ಎ.ಜಯರಾಮ್, ಕಲಾವಿದರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜಿನಪ್ಪ, ಕಾರ್ಯದರ್ಶಿ ಚಂದ್ರಶೇಖರ್, ಪ್ರಾಧ್ಯಾಪಕರಾದ ಡಾ.ಸದಾಶಿವರಾಮಚಂದ್ರಗೌಡ, ಸಿ.ರಾಮಚಂದ್ರಯ್ಯ,ಎಂ.ಎಸ್.ಸುರೇಶ್ಕುಮಾರ್,ಡಾ.ಪ್ರಕಾಶ್, ಕೆ.ಎಸ್.ಸಂದ್ಯಾರಾಣಿ,ಡಾ.ಎಂ.ಸತೀಶ್, ಜಿ.ಶ್ರಿನಿವಾಸ್ ಇದ್ದರು.

ವಿವಿಧ ಜಾನಪದ ಕಲಾ ತಂಡಗಳು ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 hour ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

3 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

4 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

8 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

19 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago