Categories: ಕೋಲಾರ

ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆಗೆ ನೀರು ಹರಿಸುವ ಭರವಸೆ ನೀಡಲಿ-ನಾರಾಯಣಗೌಡ

ಕೋಲಾರ: ಕುಡಿಯುವ ನೀರಿಗಾಗಿ 36 ಸಾವಿರ ಕೋಟಿ ವೆಚ್ಚದಲ್ಲಿ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಥ್ಯವಾಗಿ ಸಮುದ್ರ ಸೇರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ಎತ್ತಿನಹೊಳೆ ಯೋಜನೆ ನೀರು ಬಯಲುಸೀಮೆಗಳಿಗೆ ಹರಿಯುವ ಭರವಸೆ ಇದೆ ಎಂಬುದನ್ನು ಎರಡು ಜಿಲ್ಲೆಯ ಜನಪ್ರತಿನಿದಿಗಳು ಬಹಿರಂಗವಾಗಿ ಉತ್ತರ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಯಾವುದೇ ನದಿ ನಾಲೆಗಳಿಲ್ಲದ ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಪ್ರಕೃತಿಯಲ್ಲಿ ದೊರೆಯುವ ಶುದ್ದ ನೀರಿನ ಯೋಜನೆಯಾದ ಎತ್ತಿನಹೊಳೆ ಮೊದಲನೇ ಹಂತದ ಜೀವ ಜಲ ಲೋಕಾರ್ಪಣೆ ಮಾಡಿರುವುದು ಸ್ವಾಗತಾರ್ಹ ವಿಚಾರ ಆದರೆ ಜಾತಕ ಪಕ್ಷಿಗಳಂತೆ ದಶಕಗಳ ಹಿಂದೆ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿ ಕೊಳ್ಳಗಳನ್ನು ತಿರುಗಿಸಿ ಬಯಲು ಸೀಮೆಯ 7 ಜಿಲ್ಲೆಗಳಿಗೆ ನೀರು ನೀಡುತ್ತೇವೆಂದು 36 ಸಾವಿರ ಕೋಟಿ ವೆಚ್ಚದಲ್ಲಿ ಹರಿಯುತ್ತಿರುವ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ ಹರಿಯುತ್ತದೆಯೇ ಎಂಬುದು ಜನಪ್ರತಿನಿದಿಗಳಿಗೆ ಸರ್ಕಾರಕ್ಕೆ ಸಾರ್ವಜನಿಕರ ಪ್ರಶ್ನೆಯಾಗಿದೆ? ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿ ಸರ್ಕಾರದ ಕಂದಾಯ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡ ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಹರಿಯುವುದು ಸಂಶಯ ಎಂದು ಹೇಳಿಕೆ ನೀಡಿರುವುದು ಸಮಂಜಸವೇ? ಮಾಹಿತಿಯಿಲ್ಲದೆ ಅವರು ಹೇಳಿಕೆ ನೀಡಿದ್ದಾರೆಯೇ ಎಂಬುದಕ್ಕೆ ಉತ್ತರ ಮುಂದೆ ಜನಪ್ರತಿನಿದಿಗಳು ನೀಡಬೇಕಾಗಿದೆ ಎಂದರು.

ಮುಂದಿನ 2027 ಕ್ಕೆ ಅಂತ್ಯಗೊಳ್ಳುವ ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಈಗಿಲಿನಿಂದಲೇ ಪೈಪ್ ಲೈನ್ ಅಳವಡಿಸಿ ಹರಿಸದೆ ಇದ್ದರೆ ನೀರಿನ ವಿಚಾರದಲ್ಲಿ ಬಯಲು ಸೀಮೆಗೆ ಚಂದಮಾಮ ತೋರಿಸಿ ಯಾಮಾರಿಸಲು ಮುಂದಾಗಿದೆ ನೀರು ಹರಿಯದೆ ಇದ್ದರೆ ಎರಡೂ ಜಿಲ್ಲೆಯ ಜನಪ್ರತಿನಿದಿಗಳು ರಾಜೀನಾಮೆ ನೀಡಿ ಉಗ್ರವಾದ ಹೋರಾಟಕ್ಕೆ ಸೈನಿಕರಂತೆ ಮುನ್ನುಗ್ಗಬೇಕು ಇಲ್ಲವಾದರೆ ಮತ ಕೊಟ್ಟಂತಹ ಜನರೇ ನಿಮ್ಮನ್ನು ಹಳ್ಳಿ ಹಳ್ಳಿಯಲ್ಲೂ ಚೀಮಾರಿ ಹಾಕುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಎತ್ತಿನಹೊಳೆ ಹರಿಯುವ ಜಿಲ್ಲೆಯ ಕೆರೆಗಳಿಗೆ ಆಯಾ ತಾಲ್ಲೂಕಿನ ಶಾಸಕರು ವಾರಕ್ಕೆ 2 ಕೆರೆಗೆ ಭೇಟಿ ನೀಡಿ ಕೆರೆ ರಾಜಕಾಲುವೆಗಳ ಒತ್ತುವರಿ ತೆರೆವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪತ್ರಿಕಾ ಹೇಳಿಕೆ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

18 minutes ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

10 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

14 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

22 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

1 day ago