Categories: ಕೋಲಾರ

ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆಗೆ ನೀರು ಹರಿಸುವ ಭರವಸೆ ನೀಡಲಿ-ನಾರಾಯಣಗೌಡ

ಕೋಲಾರ: ಕುಡಿಯುವ ನೀರಿಗಾಗಿ 36 ಸಾವಿರ ಕೋಟಿ ವೆಚ್ಚದಲ್ಲಿ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಥ್ಯವಾಗಿ ಸಮುದ್ರ ಸೇರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ಎತ್ತಿನಹೊಳೆ ಯೋಜನೆ ನೀರು ಬಯಲುಸೀಮೆಗಳಿಗೆ ಹರಿಯುವ ಭರವಸೆ ಇದೆ ಎಂಬುದನ್ನು ಎರಡು ಜಿಲ್ಲೆಯ ಜನಪ್ರತಿನಿದಿಗಳು ಬಹಿರಂಗವಾಗಿ ಉತ್ತರ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಯಾವುದೇ ನದಿ ನಾಲೆಗಳಿಲ್ಲದ ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಪ್ರಕೃತಿಯಲ್ಲಿ ದೊರೆಯುವ ಶುದ್ದ ನೀರಿನ ಯೋಜನೆಯಾದ ಎತ್ತಿನಹೊಳೆ ಮೊದಲನೇ ಹಂತದ ಜೀವ ಜಲ ಲೋಕಾರ್ಪಣೆ ಮಾಡಿರುವುದು ಸ್ವಾಗತಾರ್ಹ ವಿಚಾರ ಆದರೆ ಜಾತಕ ಪಕ್ಷಿಗಳಂತೆ ದಶಕಗಳ ಹಿಂದೆ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿ ಕೊಳ್ಳಗಳನ್ನು ತಿರುಗಿಸಿ ಬಯಲು ಸೀಮೆಯ 7 ಜಿಲ್ಲೆಗಳಿಗೆ ನೀರು ನೀಡುತ್ತೇವೆಂದು 36 ಸಾವಿರ ಕೋಟಿ ವೆಚ್ಚದಲ್ಲಿ ಹರಿಯುತ್ತಿರುವ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ ಹರಿಯುತ್ತದೆಯೇ ಎಂಬುದು ಜನಪ್ರತಿನಿದಿಗಳಿಗೆ ಸರ್ಕಾರಕ್ಕೆ ಸಾರ್ವಜನಿಕರ ಪ್ರಶ್ನೆಯಾಗಿದೆ? ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿ ಸರ್ಕಾರದ ಕಂದಾಯ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡ ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಹರಿಯುವುದು ಸಂಶಯ ಎಂದು ಹೇಳಿಕೆ ನೀಡಿರುವುದು ಸಮಂಜಸವೇ? ಮಾಹಿತಿಯಿಲ್ಲದೆ ಅವರು ಹೇಳಿಕೆ ನೀಡಿದ್ದಾರೆಯೇ ಎಂಬುದಕ್ಕೆ ಉತ್ತರ ಮುಂದೆ ಜನಪ್ರತಿನಿದಿಗಳು ನೀಡಬೇಕಾಗಿದೆ ಎಂದರು.

ಮುಂದಿನ 2027 ಕ್ಕೆ ಅಂತ್ಯಗೊಳ್ಳುವ ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಈಗಿಲಿನಿಂದಲೇ ಪೈಪ್ ಲೈನ್ ಅಳವಡಿಸಿ ಹರಿಸದೆ ಇದ್ದರೆ ನೀರಿನ ವಿಚಾರದಲ್ಲಿ ಬಯಲು ಸೀಮೆಗೆ ಚಂದಮಾಮ ತೋರಿಸಿ ಯಾಮಾರಿಸಲು ಮುಂದಾಗಿದೆ ನೀರು ಹರಿಯದೆ ಇದ್ದರೆ ಎರಡೂ ಜಿಲ್ಲೆಯ ಜನಪ್ರತಿನಿದಿಗಳು ರಾಜೀನಾಮೆ ನೀಡಿ ಉಗ್ರವಾದ ಹೋರಾಟಕ್ಕೆ ಸೈನಿಕರಂತೆ ಮುನ್ನುಗ್ಗಬೇಕು ಇಲ್ಲವಾದರೆ ಮತ ಕೊಟ್ಟಂತಹ ಜನರೇ ನಿಮ್ಮನ್ನು ಹಳ್ಳಿ ಹಳ್ಳಿಯಲ್ಲೂ ಚೀಮಾರಿ ಹಾಕುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಎತ್ತಿನಹೊಳೆ ಹರಿಯುವ ಜಿಲ್ಲೆಯ ಕೆರೆಗಳಿಗೆ ಆಯಾ ತಾಲ್ಲೂಕಿನ ಶಾಸಕರು ವಾರಕ್ಕೆ 2 ಕೆರೆಗೆ ಭೇಟಿ ನೀಡಿ ಕೆರೆ ರಾಜಕಾಲುವೆಗಳ ಒತ್ತುವರಿ ತೆರೆವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪತ್ರಿಕಾ ಹೇಳಿಕೆ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

8 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

10 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

11 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

13 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

16 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

20 hours ago