Categories: ಕೋಲಾರ

ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆಗೆ ನೀರು ಹರಿಸುವ ಭರವಸೆ ನೀಡಲಿ-ನಾರಾಯಣಗೌಡ

ಕೋಲಾರ: ಕುಡಿಯುವ ನೀರಿಗಾಗಿ 36 ಸಾವಿರ ಕೋಟಿ ವೆಚ್ಚದಲ್ಲಿ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಥ್ಯವಾಗಿ ಸಮುದ್ರ ಸೇರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ಎತ್ತಿನಹೊಳೆ ಯೋಜನೆ ನೀರು ಬಯಲುಸೀಮೆಗಳಿಗೆ ಹರಿಯುವ ಭರವಸೆ ಇದೆ ಎಂಬುದನ್ನು ಎರಡು ಜಿಲ್ಲೆಯ ಜನಪ್ರತಿನಿದಿಗಳು ಬಹಿರಂಗವಾಗಿ ಉತ್ತರ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಯಾವುದೇ ನದಿ ನಾಲೆಗಳಿಲ್ಲದ ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಪ್ರಕೃತಿಯಲ್ಲಿ ದೊರೆಯುವ ಶುದ್ದ ನೀರಿನ ಯೋಜನೆಯಾದ ಎತ್ತಿನಹೊಳೆ ಮೊದಲನೇ ಹಂತದ ಜೀವ ಜಲ ಲೋಕಾರ್ಪಣೆ ಮಾಡಿರುವುದು ಸ್ವಾಗತಾರ್ಹ ವಿಚಾರ ಆದರೆ ಜಾತಕ ಪಕ್ಷಿಗಳಂತೆ ದಶಕಗಳ ಹಿಂದೆ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿ ಕೊಳ್ಳಗಳನ್ನು ತಿರುಗಿಸಿ ಬಯಲು ಸೀಮೆಯ 7 ಜಿಲ್ಲೆಗಳಿಗೆ ನೀರು ನೀಡುತ್ತೇವೆಂದು 36 ಸಾವಿರ ಕೋಟಿ ವೆಚ್ಚದಲ್ಲಿ ಹರಿಯುತ್ತಿರುವ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ ಹರಿಯುತ್ತದೆಯೇ ಎಂಬುದು ಜನಪ್ರತಿನಿದಿಗಳಿಗೆ ಸರ್ಕಾರಕ್ಕೆ ಸಾರ್ವಜನಿಕರ ಪ್ರಶ್ನೆಯಾಗಿದೆ? ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿ ಸರ್ಕಾರದ ಕಂದಾಯ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡ ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಹರಿಯುವುದು ಸಂಶಯ ಎಂದು ಹೇಳಿಕೆ ನೀಡಿರುವುದು ಸಮಂಜಸವೇ? ಮಾಹಿತಿಯಿಲ್ಲದೆ ಅವರು ಹೇಳಿಕೆ ನೀಡಿದ್ದಾರೆಯೇ ಎಂಬುದಕ್ಕೆ ಉತ್ತರ ಮುಂದೆ ಜನಪ್ರತಿನಿದಿಗಳು ನೀಡಬೇಕಾಗಿದೆ ಎಂದರು.

ಮುಂದಿನ 2027 ಕ್ಕೆ ಅಂತ್ಯಗೊಳ್ಳುವ ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಈಗಿಲಿನಿಂದಲೇ ಪೈಪ್ ಲೈನ್ ಅಳವಡಿಸಿ ಹರಿಸದೆ ಇದ್ದರೆ ನೀರಿನ ವಿಚಾರದಲ್ಲಿ ಬಯಲು ಸೀಮೆಗೆ ಚಂದಮಾಮ ತೋರಿಸಿ ಯಾಮಾರಿಸಲು ಮುಂದಾಗಿದೆ ನೀರು ಹರಿಯದೆ ಇದ್ದರೆ ಎರಡೂ ಜಿಲ್ಲೆಯ ಜನಪ್ರತಿನಿದಿಗಳು ರಾಜೀನಾಮೆ ನೀಡಿ ಉಗ್ರವಾದ ಹೋರಾಟಕ್ಕೆ ಸೈನಿಕರಂತೆ ಮುನ್ನುಗ್ಗಬೇಕು ಇಲ್ಲವಾದರೆ ಮತ ಕೊಟ್ಟಂತಹ ಜನರೇ ನಿಮ್ಮನ್ನು ಹಳ್ಳಿ ಹಳ್ಳಿಯಲ್ಲೂ ಚೀಮಾರಿ ಹಾಕುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಎತ್ತಿನಹೊಳೆ ಹರಿಯುವ ಜಿಲ್ಲೆಯ ಕೆರೆಗಳಿಗೆ ಆಯಾ ತಾಲ್ಲೂಕಿನ ಶಾಸಕರು ವಾರಕ್ಕೆ 2 ಕೆರೆಗೆ ಭೇಟಿ ನೀಡಿ ಕೆರೆ ರಾಜಕಾಲುವೆಗಳ ಒತ್ತುವರಿ ತೆರೆವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪತ್ರಿಕಾ ಹೇಳಿಕೆ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

3 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

4 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

4 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

5 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

6 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

14 hours ago