Categories: ಕೋಲಾರ

ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆಗೆ ನೀರು ಹರಿಸುವ ಭರವಸೆ ನೀಡಲಿ-ನಾರಾಯಣಗೌಡ

ಕೋಲಾರ: ಕುಡಿಯುವ ನೀರಿಗಾಗಿ 36 ಸಾವಿರ ಕೋಟಿ ವೆಚ್ಚದಲ್ಲಿ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಥ್ಯವಾಗಿ ಸಮುದ್ರ ಸೇರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ಎತ್ತಿನಹೊಳೆ ಯೋಜನೆ ನೀರು ಬಯಲುಸೀಮೆಗಳಿಗೆ ಹರಿಯುವ ಭರವಸೆ ಇದೆ ಎಂಬುದನ್ನು ಎರಡು ಜಿಲ್ಲೆಯ ಜನಪ್ರತಿನಿದಿಗಳು ಬಹಿರಂಗವಾಗಿ ಉತ್ತರ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಯಾವುದೇ ನದಿ ನಾಲೆಗಳಿಲ್ಲದ ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಪ್ರಕೃತಿಯಲ್ಲಿ ದೊರೆಯುವ ಶುದ್ದ ನೀರಿನ ಯೋಜನೆಯಾದ ಎತ್ತಿನಹೊಳೆ ಮೊದಲನೇ ಹಂತದ ಜೀವ ಜಲ ಲೋಕಾರ್ಪಣೆ ಮಾಡಿರುವುದು ಸ್ವಾಗತಾರ್ಹ ವಿಚಾರ ಆದರೆ ಜಾತಕ ಪಕ್ಷಿಗಳಂತೆ ದಶಕಗಳ ಹಿಂದೆ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿ ಕೊಳ್ಳಗಳನ್ನು ತಿರುಗಿಸಿ ಬಯಲು ಸೀಮೆಯ 7 ಜಿಲ್ಲೆಗಳಿಗೆ ನೀರು ನೀಡುತ್ತೇವೆಂದು 36 ಸಾವಿರ ಕೋಟಿ ವೆಚ್ಚದಲ್ಲಿ ಹರಿಯುತ್ತಿರುವ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ ಹರಿಯುತ್ತದೆಯೇ ಎಂಬುದು ಜನಪ್ರತಿನಿದಿಗಳಿಗೆ ಸರ್ಕಾರಕ್ಕೆ ಸಾರ್ವಜನಿಕರ ಪ್ರಶ್ನೆಯಾಗಿದೆ? ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿ ಸರ್ಕಾರದ ಕಂದಾಯ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡ ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಹರಿಯುವುದು ಸಂಶಯ ಎಂದು ಹೇಳಿಕೆ ನೀಡಿರುವುದು ಸಮಂಜಸವೇ? ಮಾಹಿತಿಯಿಲ್ಲದೆ ಅವರು ಹೇಳಿಕೆ ನೀಡಿದ್ದಾರೆಯೇ ಎಂಬುದಕ್ಕೆ ಉತ್ತರ ಮುಂದೆ ಜನಪ್ರತಿನಿದಿಗಳು ನೀಡಬೇಕಾಗಿದೆ ಎಂದರು.

ಮುಂದಿನ 2027 ಕ್ಕೆ ಅಂತ್ಯಗೊಳ್ಳುವ ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಈಗಿಲಿನಿಂದಲೇ ಪೈಪ್ ಲೈನ್ ಅಳವಡಿಸಿ ಹರಿಸದೆ ಇದ್ದರೆ ನೀರಿನ ವಿಚಾರದಲ್ಲಿ ಬಯಲು ಸೀಮೆಗೆ ಚಂದಮಾಮ ತೋರಿಸಿ ಯಾಮಾರಿಸಲು ಮುಂದಾಗಿದೆ ನೀರು ಹರಿಯದೆ ಇದ್ದರೆ ಎರಡೂ ಜಿಲ್ಲೆಯ ಜನಪ್ರತಿನಿದಿಗಳು ರಾಜೀನಾಮೆ ನೀಡಿ ಉಗ್ರವಾದ ಹೋರಾಟಕ್ಕೆ ಸೈನಿಕರಂತೆ ಮುನ್ನುಗ್ಗಬೇಕು ಇಲ್ಲವಾದರೆ ಮತ ಕೊಟ್ಟಂತಹ ಜನರೇ ನಿಮ್ಮನ್ನು ಹಳ್ಳಿ ಹಳ್ಳಿಯಲ್ಲೂ ಚೀಮಾರಿ ಹಾಕುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಎತ್ತಿನಹೊಳೆ ಹರಿಯುವ ಜಿಲ್ಲೆಯ ಕೆರೆಗಳಿಗೆ ಆಯಾ ತಾಲ್ಲೂಕಿನ ಶಾಸಕರು ವಾರಕ್ಕೆ 2 ಕೆರೆಗೆ ಭೇಟಿ ನೀಡಿ ಕೆರೆ ರಾಜಕಾಲುವೆಗಳ ಒತ್ತುವರಿ ತೆರೆವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪತ್ರಿಕಾ ಹೇಳಿಕೆ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

11 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

12 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

12 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

15 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

21 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

1 day ago