Categories: ಕೋಲಾರ

ಜನಪ್ರತಿನಿಧಿಗಳು ಎತ್ತಿನಹೊಳೆ ಯೋಜನೆಯಿಂದ ಬಯಲುಸೀಮೆಗೆ ನೀರು ಹರಿಸುವ ಭರವಸೆ ನೀಡಲಿ-ನಾರಾಯಣಗೌಡ

ಕೋಲಾರ: ಕುಡಿಯುವ ನೀರಿಗಾಗಿ 36 ಸಾವಿರ ಕೋಟಿ ವೆಚ್ಚದಲ್ಲಿ ಮಳೆಗಾಲದಲ್ಲಿ ಪಶ್ಚಿಮ ಘಟ್ಟಗಳಲ್ಲಿ ವ್ಯಥ್ಯವಾಗಿ ಸಮುದ್ರ ಸೇರುವ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ಎತ್ತಿನಹೊಳೆ ಯೋಜನೆ ನೀರು ಬಯಲುಸೀಮೆಗಳಿಗೆ ಹರಿಯುವ ಭರವಸೆ ಇದೆ ಎಂಬುದನ್ನು ಎರಡು ಜಿಲ್ಲೆಯ ಜನಪ್ರತಿನಿದಿಗಳು ಬಹಿರಂಗವಾಗಿ ಉತ್ತರ ನೀಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಯಾವುದೇ ನದಿ ನಾಲೆಗಳಿಲ್ಲದ ಕೋಲಾರ ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳಿಗೆ ಪ್ರಕೃತಿಯಲ್ಲಿ ದೊರೆಯುವ ಶುದ್ದ ನೀರಿನ ಯೋಜನೆಯಾದ ಎತ್ತಿನಹೊಳೆ ಮೊದಲನೇ ಹಂತದ ಜೀವ ಜಲ ಲೋಕಾರ್ಪಣೆ ಮಾಡಿರುವುದು ಸ್ವಾಗತಾರ್ಹ ವಿಚಾರ ಆದರೆ ಜಾತಕ ಪಕ್ಷಿಗಳಂತೆ ದಶಕಗಳ ಹಿಂದೆ ಪಶ್ಚಿಮ ಘಟ್ಟಗಳಲ್ಲಿ ಹರಿಯುವ ನದಿ ಕೊಳ್ಳಗಳನ್ನು ತಿರುಗಿಸಿ ಬಯಲು ಸೀಮೆಯ 7 ಜಿಲ್ಲೆಗಳಿಗೆ ನೀರು ನೀಡುತ್ತೇವೆಂದು 36 ಸಾವಿರ ಕೋಟಿ ವೆಚ್ಚದಲ್ಲಿ ಹರಿಯುತ್ತಿರುವ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ ಹರಿಯುತ್ತದೆಯೇ ಎಂಬುದು ಜನಪ್ರತಿನಿದಿಗಳಿಗೆ ಸರ್ಕಾರಕ್ಕೆ ಸಾರ್ವಜನಿಕರ ಪ್ರಶ್ನೆಯಾಗಿದೆ? ಜಿಲ್ಲೆಯ ಸ್ಥಳೀಯ ಜನಪ್ರತಿನಿಧಿ ಸರ್ಕಾರದ ಕಂದಾಯ ಮಂತ್ರಿಯಾಗಿರುವ ಕೃಷ್ಣ ಬೈರೇಗೌಡ ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಹರಿಯುವುದು ಸಂಶಯ ಎಂದು ಹೇಳಿಕೆ ನೀಡಿರುವುದು ಸಮಂಜಸವೇ? ಮಾಹಿತಿಯಿಲ್ಲದೆ ಅವರು ಹೇಳಿಕೆ ನೀಡಿದ್ದಾರೆಯೇ ಎಂಬುದಕ್ಕೆ ಉತ್ತರ ಮುಂದೆ ಜನಪ್ರತಿನಿದಿಗಳು ನೀಡಬೇಕಾಗಿದೆ ಎಂದರು.

ಮುಂದಿನ 2027 ಕ್ಕೆ ಅಂತ್ಯಗೊಳ್ಳುವ ಎತ್ತಿನಹೊಳೆ ಯೋಜನೆ ಕೋಲಾರ ಜಿಲ್ಲೆಗೆ ಈಗಿಲಿನಿಂದಲೇ ಪೈಪ್ ಲೈನ್ ಅಳವಡಿಸಿ ಹರಿಸದೆ ಇದ್ದರೆ ನೀರಿನ ವಿಚಾರದಲ್ಲಿ ಬಯಲು ಸೀಮೆಗೆ ಚಂದಮಾಮ ತೋರಿಸಿ ಯಾಮಾರಿಸಲು ಮುಂದಾಗಿದೆ ನೀರು ಹರಿಯದೆ ಇದ್ದರೆ ಎರಡೂ ಜಿಲ್ಲೆಯ ಜನಪ್ರತಿನಿದಿಗಳು ರಾಜೀನಾಮೆ ನೀಡಿ ಉಗ್ರವಾದ ಹೋರಾಟಕ್ಕೆ ಸೈನಿಕರಂತೆ ಮುನ್ನುಗ್ಗಬೇಕು ಇಲ್ಲವಾದರೆ ಮತ ಕೊಟ್ಟಂತಹ ಜನರೇ ನಿಮ್ಮನ್ನು ಹಳ್ಳಿ ಹಳ್ಳಿಯಲ್ಲೂ ಚೀಮಾರಿ ಹಾಕುವ ಕಾಲ ದೂರವಿಲ್ಲ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಎತ್ತಿನಹೊಳೆ ಹರಿಯುವ ಜಿಲ್ಲೆಯ ಕೆರೆಗಳಿಗೆ ಆಯಾ ತಾಲ್ಲೂಕಿನ ಶಾಸಕರು ವಾರಕ್ಕೆ 2 ಕೆರೆಗೆ ಭೇಟಿ ನೀಡಿ ಕೆರೆ ರಾಜಕಾಲುವೆಗಳ ಒತ್ತುವರಿ ತೆರೆವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಯ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪತ್ರಿಕಾ ಹೇಳಿಕೆ ನೀಡುವಾಗ ಮಂಗಸಂದ್ರ ತಿಮ್ಮಣ್ಣ, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago