Categories: ಕೋಲಾರ

ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ

ಜನರಿಗೆ ಜಾಗೃತಿ ಮೂಡಿಸಲು, ಸರಿಯಾದ ಮಾಹಿತಿ ತಲುಪಿಸಲು ಮಾಧ್ಯಮ ಬೇಕು. ಸಮಾಜದಲ್ಲಿನ ತಪ್ಪುಗಳನ್ನು ಹೊರತರಲು ಜೊತೆಯಾಗಿ ಕೆಲಸ ಮಾಡೋಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶುಕ್ರವಾರ ಆಯೋಜಿಸಿದ್ದ ಸಂವಾದ ಮತ್ತು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ಭಾರತೀಯ ನ್ಯಾಯ ಸಂಹಿತೆ ಕುರಿತು ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಜನತೆಗೆ ತಿಳಿವಳಿಕೆ ಮೂಡಿಸುವುದು. 15 ದಿನಕ್ಕೊಮ್ಮೆ ಆರಕ್ಷಕರ ದಿನ ಆಚರಣೆ. ಮಾದಕ ವಸ್ತುಗಳ ಬಗ್ಗೆ ಶಾಲಾ ಕಾಲೇಜುಗಳಿಗೆ ತೆರಳಿ ಜಾಗೃತಿ ಮೂಡಿಸಲಾಗುವುದು. ಪ್ರಕರಣ ದಾಖಲಾದರೆ ಭವಿಷ್ಯದ ಮೇಲೆ ಯಾವ ರೀತಿ ಪರಿಣಾಮ ಉಂಟಾಗುತ್ತದೆ ಎಂಬುದರ ಬಗ್ಗೆ ತಿಳಿವಳಿಕೆ ಮೂಡಿಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳನ್ನು ಠಾಣೆಗೆ ಕರೆಯಿಸಿ “ತೆರೆದ ಮನೆ” ಕಾರ್ಯಕ್ರಮ ನಡೆಸುವ ಮೂಲಕ ಅರಿವು ಮೂಡಿಸಲಾಗುವುದು ಎಂದರು.

ಮಹಿಳೆಯರು ಹಾಗೂ ಮಕ್ಕಳ ಮೇಲಿನ ಅಪರಾಧ ಸಂಬಂಧ ಸಮನ್ವಯ ಸಾಧಿಸಬೇಕು. ಈ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ಈಗಾಗಲೇ ಎರಡು ಸಭೆ ನಡೆದಿದೆ. ಮಹಿಳೆಯರು ಹಾಗೂ ಹಿರಿಯ ನಾಗರೀಕರಿಗೆ ಧೈರ್ಯ ತುಂಬುವುದು ನಮ್ಮ ಆದ್ಯತೆ. ದೂರು ಕೊಡಲು ಬರುವವರ ಮಾತು ಆಲಿಸಬೇಕು ನಂತರ ಕ್ರಮ ವಹಿಸಬೇಕೆಂದು ಹೇಳಿದರು.

ಬಿ.ಎನ್.ಎಸ್ ಬಗ್ಗೆ ಗೊತ್ತಿರಬೇಕು. ದೇಶದ ಯಾವುದೇ ಭಾಗದಲ್ಲಿ ಘಟನೆ ನಡೆದರೂ ಬೇರೆ ಯಾವುದೇ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು. ಆದರೆ, ತನಿಖೆ ಮಾತ್ರ ಅದೇ ಠಾಣೆಯಲ್ಲಿ ನಡೆಯುತ್ತದೆ. ಆನ್ ಲೈನ್ ಮೂಲಕ ದೂರು ದಾಖಲಿಸಬಹುದು. ಆದರೆ, ಠಾಣೆಗೆ ಬಂದು ಇ ಸಿಗ್ನೇಚರ್ ಮಾಡಿದ ಮೇಲೆ ಎಫ್.ಐ.ಆರ್ ದಾಖಲಾಗುತ್ತದೆ ಎಂದು ವಿವರಿಸಿದರು.

ಏಳು ವರ್ಷದ ಮೇಲಿನ ಪ್ರಕರಣಗಳಲ್ಲಿ ವಿಡಿಯೊ ರೆಕಾರ್ಡ್ ಮಾಡಬಹುದು. ಹೀನಿಯಸ್ ಅಪರಾಧ ವಿಡಿಯೊ ರೆಕಾರ್ಡ್ ಮಾಡುತ್ತಿದ್ದೇವೆ. ನಮ್ಮಲ್ಲಿ ಪೈಲಟ್ ಕಾರ್ಯಕ್ರಮವಾಗಿ ಪರಿಗಣಿಸುತ್ತಿದ್ದೇವೆ.

7 ವರ್ಷದ ಕೆಳಗಿನ ಶಿಕ್ಷೆಯ ಪ್ರಮಾಣದ ಪ್ರಕರಣಗಳಿಗೆ ಬಂಧನ ಮಾಡಬೇಕಾದರೆ ಡಿಎಸ್ಪಿ ಅನುಮತಿ ಬೇಕಾಗುತ್ತದೆ. ಎಫ್.ಐ.ಆರ್ ಗೆ ಮೊದಲು 15 ದಿನ ಡಿಎಸ್ಪಿ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸುವ ಅವಕಾಶವೂ ಇದೆ ಎಂದು ಹೇಳಿದರು.

ರೇಪ್ ವಿಕ್ಟಿಮ್ ಗೆ ವೈದ್ಯಕೀಯ ಪರೀಕ್ಷೆಗೆ ಸಮಯ ನಿಗಧಿಪಡಿಸಿದ್ದಾರೆ. ಮಹಿಳಾ ವೈದ್ಯರೇ ಪರೀಕ್ಷೆ ನಡೆಸಬೇಕು. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಕೊಳ್ಳಲಾಗಿದೆ. ಹಾಗೆಯೇ ಹಿರಿಯ ನಾಗರಿಕರು ಅಥವಾ ಮಹಿಳೆಯರಿಂದ ಹೇಳಿಕೆ ಪಡೆಯಲು ಅವರ ಮನೆಗೆ ಹೋಗಿ ಪಡೆಯಬಹುದು. ಹಿಂದೆ ಠಾಣೆಗೆ ಬರಬೇಕಿತ್ತು. ಭದ್ರತಾ ದೃಷ್ಟಿಯಿಂದ ಈ ಕ್ರಮ ವಹಿಸಲಾಗಿದೆ ಎಂದರು. ನ್ಯಾಯಾಲಯದಲ್ಲಿ ಈ ಅಂಶಗಳನ್ನು ಪ್ರಶ್ನೆ ಮಾಡಬಹುದು.

ಬಿ.ಎನ್.ಎಸ್‌ನಲ್ಲಿ ಶಿಕ್ಷೆ ಸಮುದಾಯ ಸೇವೆ ಮಾಡುವ ನಿಯಮ ತರಲಾಗಿದೆ. ಇದು ನ್ಯಾಯಾಲಯ ಕೊಡುತ್ತದೆ. ಅಪರಾಧಿ ಸುಧಾರಣೆಗೆ ಈ ನಿಯಮ ಜಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ ಪೊಲೀಸರಿಗೆ 8 ಕಾರ್ಯಾಗಾರ ನಡೆಸಲಾಗಿದೆ. ಪತ್ರಕರ್ತರಲ್ಲದವರು ಪ್ರೆಸ್ ಎಂಬ ಫಲಕ ಹಾಕಿರುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ಔಷಧಿ ಅಂಗಡಿ ಹೊರತುಪಡಿಸಿ ರಾತ್ರಿ 11 ಗಂಟೆಯೊಳಗೆ ಅಂಗಡಿಗಳನ್ನು ಮುಚ್ಚಬೇಕು ಎಂಬ ಆದೇಶದ ಬಗ್ಗೆ ಮಾಹಿತಿ ನೀಡಿ ಕೋಲಾರ ಜಿಲ್ಲಾ ಪತ್ರಕರ್ತರ ಸಂಘವು ಮಾದರಿ ಪತ್ರಕರ್ತರ ಸಂಘವಾಗಿದೆ. ಇಡೀ ರಾಜ್ಯದಲ್ಲಿ ಈ ರೀತಿಯ ಕಾರ್ಯಕ್ರಮ ಎಲ್ಲೂ ನೋಡಿಲ್ಲ. ಇಲ್ಲಿಯ ಜನರು ಪರಿಶ್ರಮಿಗಳು ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಮಾತನಾಡಿ, ಡಿ.ಸಿ, ಸಿಇಒ, ಎಸ್.ಪಿ ಆಡಳಿತ ಆಧಾರ ಸ್ತಂಭಗಳು. ಭಾರತೀಯ ನ್ಯಾಯ ಸಂಹಿತೆ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರಬೇಕು. ಪತ್ರಕರ್ತರು ಹಾಗೂ ಪೊಲೀಸರ ನಡುವೆ ಉತ್ತಮ ಬಾಂಧವ್ಯ ಇರಲಿ. ಪ್ರೆಸ್ ಸ್ಟಿಕರ್ ಕೊಡಿ. ದುರ್ಬಳಕೆ ಬೇಡ. ಪತ್ರಕರ್ತರಲ್ಲದ ಯಾರೋ ಯಾರೋ ಪ್ರೆಸ್ ಸ್ಟಿಕರ್ ಅಂಟಿಸಿಕೊಂಡಿರುತ್ತಾರೆ ಇದರ ಬಗ್ಗೆ ಗಮನ ವಹಿಸಬೇಕು ಎಂದರು.

ವೇದಿಕೆಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು, ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ ಕುಮಾರ್ ಸೇರಿದಂತೆ ಪತ್ರಕರ್ತರು ಇದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

5 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

8 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago