ಜನರು ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ: ಕಟ್ಟಾ ಸುಬ್ರಮಣ್ಯ ನಾಯ್ಡು

ಜನರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಈ ಬಾರಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆಲ್ಲಲು ಪ್ರಣಾಳಿಕೆ ಕೂಡ ಮಹತ್ತರ ಪಾತ್ರ ವಹಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿಂದು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪ್ರತಿಯೊಬ್ಬ‌ ಮಹಿಳೆಯರಿಗೆ ಪ್ರತಿ ತಿಂಗಳು ಎರಡು‌ ಸಾವಿರ ರೂ. ಹತ್ತು ಕೆಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರೆ ಅಂಶಗಳಿಗೆ ಮನಸೋತು ಕಾಂಗ್ರೆಸ್ ಗೆ ಮತ ನೀಡಿದ್ದಾರೆ ಎಂದರು.

ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅದರಲ್ಲಿ ಏನೂ ವಿಶೇಷತೆ ಇಲ್ಲ‌, ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗೋದಿಲ್ಲ, ಬದಲಾವಣೆ ಸಹಜ‌ ಕ್ರಿಯೆ ಎಂದು ಹೇಳಿದರು.

ಈ ಬಾರಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ ಬಿಜೆಪಿ ಮುಕ್ತ ಕರ್ನಾಟಕ ಎಂದು ಹೇಳೋದಕ್ಕೆ ಬರೋದಿಲ್ಲ, ಜನರ ತೀರ್ಪಿಗೆ ನಾವು ತಲೆ ಬಾಗಿಸಲೇಬೇಕು. ಐದು ವರ್ಷ ನಂತರ ಜನ ಬಿಜೆಪಿಯನ್ನ ಗೆಲ್ಲಿಸಬಹುದು ಆದ್ದರಿಂದ ಇಲ್ಲಿನ ಕಾಲಚಕ್ರದಲ್ಲಿ ಯಾರೂ ಶಾಶ್ವತ ಅಲ್ಲ ಎಂದರು.

ಈ ಬಾರಿ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಹಿರಿಯರು ಕೂತು ವಿಶ್ಲೇಷಣೆ, ಮಾಹಿತಿ ಸಂಗ್ರಹ ಮಾಡಿ ಎಲ್ಲಿ ಯಾವ ವಿಷಯದಲ್ಲಿ ಮತ ಪಡೆಯುವಲ್ಲಿ ವಿಫಲವಾಗಿದ್ದೇವೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಲು ಕಾರಣಗಳೇನು ಎಂಬುದನ್ನು ಕಂಡುಹಿಡಿದು ಅದನ್ನು ಮುಂದಿನ ಬಾರಿಗೆ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ, ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ, ಯುವಕರಿಗೆ ಅವಕಾಶ ಸಿಗಬೇಕು, ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

8 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

9 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

9 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

9 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

12 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

15 hours ago