ಜನರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಈ ಬಾರಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆಲ್ಲಲು ಪ್ರಣಾಳಿಕೆ ಕೂಡ ಮಹತ್ತರ ಪಾತ್ರ ವಹಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿಂದು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪ್ರತಿಯೊಬ್ಬ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಹತ್ತು ಕೆಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರೆ ಅಂಶಗಳಿಗೆ ಮನಸೋತು ಕಾಂಗ್ರೆಸ್ ಗೆ ಮತ ನೀಡಿದ್ದಾರೆ ಎಂದರು.
ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅದರಲ್ಲಿ ಏನೂ ವಿಶೇಷತೆ ಇಲ್ಲ, ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗೋದಿಲ್ಲ, ಬದಲಾವಣೆ ಸಹಜ ಕ್ರಿಯೆ ಎಂದು ಹೇಳಿದರು.
ಈ ಬಾರಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ ಬಿಜೆಪಿ ಮುಕ್ತ ಕರ್ನಾಟಕ ಎಂದು ಹೇಳೋದಕ್ಕೆ ಬರೋದಿಲ್ಲ, ಜನರ ತೀರ್ಪಿಗೆ ನಾವು ತಲೆ ಬಾಗಿಸಲೇಬೇಕು. ಐದು ವರ್ಷ ನಂತರ ಜನ ಬಿಜೆಪಿಯನ್ನ ಗೆಲ್ಲಿಸಬಹುದು ಆದ್ದರಿಂದ ಇಲ್ಲಿನ ಕಾಲಚಕ್ರದಲ್ಲಿ ಯಾರೂ ಶಾಶ್ವತ ಅಲ್ಲ ಎಂದರು.
ಈ ಬಾರಿ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಹಿರಿಯರು ಕೂತು ವಿಶ್ಲೇಷಣೆ, ಮಾಹಿತಿ ಸಂಗ್ರಹ ಮಾಡಿ ಎಲ್ಲಿ ಯಾವ ವಿಷಯದಲ್ಲಿ ಮತ ಪಡೆಯುವಲ್ಲಿ ವಿಫಲವಾಗಿದ್ದೇವೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಲು ಕಾರಣಗಳೇನು ಎಂಬುದನ್ನು ಕಂಡುಹಿಡಿದು ಅದನ್ನು ಮುಂದಿನ ಬಾರಿಗೆ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.
ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ, ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ, ಯುವಕರಿಗೆ ಅವಕಾಶ ಸಿಗಬೇಕು, ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…