ಜನರು ರಾಜ್ಯದಲ್ಲಿ ಬದಲಾವಣೆ ಬಯಸಿದ್ದಾರೆ: ಕಟ್ಟಾ ಸುಬ್ರಮಣ್ಯ ನಾಯ್ಡು

ಜನರು ರಾಜ್ಯದಲ್ಲಿ ಬದಲಾವಣೆ ಬಯಸಿ ಕಾಂಗ್ರೆಸ್ ನ್ನು ಈ ಬಾರಿ ಬೆಂಬಲಿಸಿದ್ದಾರೆ. ಕಾಂಗ್ರೆಸ್ ಗೆಲ್ಲಲು ಪ್ರಣಾಳಿಕೆ ಕೂಡ ಮಹತ್ತರ ಪಾತ್ರ ವಹಿಸಿದೆ ಎಂದು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿಂದು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ಪ್ರತಿಯೊಬ್ಬ‌ ಮಹಿಳೆಯರಿಗೆ ಪ್ರತಿ ತಿಂಗಳು ಎರಡು‌ ಸಾವಿರ ರೂ. ಹತ್ತು ಕೆಜಿ ಅಕ್ಕಿ, ಉಚಿತ ಸಿಲಿಂಡರ್ ಸೇರಿದಂತೆ ಇತರೆ ಅಂಶಗಳಿಗೆ ಮನಸೋತು ಕಾಂಗ್ರೆಸ್ ಗೆ ಮತ ನೀಡಿದ್ದಾರೆ ಎಂದರು.

ಈ ಬಾರಿ ಕಾಂಗ್ರೆಸ್ ಬಹುಮತ ಪಡೆದಿದೆ, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅದರಲ್ಲಿ ಏನೂ ವಿಶೇಷತೆ ಇಲ್ಲ‌, ಯಾರೂ ಕೂಡ ದೀರ್ಘಕಾಲದ ಅಧಿಕಾರ, ಆಡಳಿತ ನಡೆಸುವುದಕ್ಕೆ ಆಗೋದಿಲ್ಲ, ಬದಲಾವಣೆ ಸಹಜ‌ ಕ್ರಿಯೆ ಎಂದು ಹೇಳಿದರು.

ಈ ಬಾರಿ ಬಿಜೆಪಿ ಸೋತಿದೆ ಎಂಬ ಕಾರಣಕ್ಕೆ ಬಿಜೆಪಿ ಮುಕ್ತ ಕರ್ನಾಟಕ ಎಂದು ಹೇಳೋದಕ್ಕೆ ಬರೋದಿಲ್ಲ, ಜನರ ತೀರ್ಪಿಗೆ ನಾವು ತಲೆ ಬಾಗಿಸಲೇಬೇಕು. ಐದು ವರ್ಷ ನಂತರ ಜನ ಬಿಜೆಪಿಯನ್ನ ಗೆಲ್ಲಿಸಬಹುದು ಆದ್ದರಿಂದ ಇಲ್ಲಿನ ಕಾಲಚಕ್ರದಲ್ಲಿ ಯಾರೂ ಶಾಶ್ವತ ಅಲ್ಲ ಎಂದರು.

ಈ ಬಾರಿ ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಹಿರಿಯರು ಕೂತು ವಿಶ್ಲೇಷಣೆ, ಮಾಹಿತಿ ಸಂಗ್ರಹ ಮಾಡಿ ಎಲ್ಲಿ ಯಾವ ವಿಷಯದಲ್ಲಿ ಮತ ಪಡೆಯುವಲ್ಲಿ ವಿಫಲವಾಗಿದ್ದೇವೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಲು ಕಾರಣಗಳೇನು ಎಂಬುದನ್ನು ಕಂಡುಹಿಡಿದು ಅದನ್ನು ಮುಂದಿನ ಬಾರಿಗೆ ಸರಿಪಡಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.

ನಾನೇನು ರಾಜಕೀಯದಲ್ಲಿ ನಿಷ್ಕ್ರಿಯವಾಗಿಲ್ಲ, ಕೆಲವೊಂದು ಸಂದರ್ಭಗಳು ಹಾಗೆ ಮಾಡಿದೆ. ನನಗೆ ವಯಸ್ಸಾಗಿದೆ, ಯುವಕರಿಗೆ ಅವಕಾಶ ಸಿಗಬೇಕು, ಪಕ್ಷದ ಸಿದ್ಧಾಂತಕ್ಕೆ ನಾವು ಕಟ್ಟುಬೀಳಬೇಕು ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

18 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

23 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

2 days ago