ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ-ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌

ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಹಳೇಹಳ್ಳಿ, ಶ್ಯಾಂಪುರ, ಗೌಡಗೆರೆ, ಪುರ, ಜರಬಂಡಹಳ್ಳಿ, ಮಿಣಕನಗುರ್ಕಿ, ಮಂಚೇನಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು.

ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ 400 ಮೀರಿ ಸ್ಥಾನಗಳು ಲಭ್ಯವಾಗಲಿದೆ. ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳಿಗೆ 40 ಸ್ಥಾನ ಲಭ್ಯವಾಗಲಿದೆ. ಮೋದಿಗೆ ಜೈಕಾರ ಹಾಕುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ‌ಮೋದಿಯವರ ಸಮಾಗಮಕ್ಕೆ‌ ಜನರು ಮತ ನೀಡಲಿದ್ದಾರೆ ಎಂದರು.

ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ. ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಧಿಕ ಮಳೆಯಾಗಿತ್ತು. ಅದಕ್ಕೆ ಕೂಡ ದುಪ್ಪಟ್ಟು ಪ್ರಮಾಣದಲ್ಲಿ ಒಂದೇ ತಿಂಗಳಲ್ಲಿ ಪರಿಹಾರ ನೀಡಲಾಗಿತ್ತು. ಈಗ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ ಎಂದರು.

ನನ್ನ ವಿರುದ್ಧ ಕಾಂಗ್ರೆಸ್‌ನಿಂದ ಶ್ರೀಮಂತರನ್ನು ನಿಲ್ಲಿಸಲಾಗಿದೆ. ಆದರೆ ಹಣಬಲಕ್ಕಿಂತ ಹೆಚ್ಚಾಗಿ ಅಭಿವೃದ್ಧಿ ಕೆಲಸ ಮತ್ತು ಪ್ರಧಾನಿ ಮೋದಿಯವರ ಕೆಲಸಗಳು ಇಲ್ಲಿ ಜನರಿಗೆ ಮುಖ್ಯವಾಗುತ್ತದೆ. ಕಾಂಗ್ರೆಸ್‌ ಏನೂ ಕೆಲಸ ಮಾಡದೆ, ಹೇಳಿಕೊಳ್ಳಲು ಏನೂ ಸರಕಿಲ್ಲದೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಆದರೆ ನಾವು ರಾಷ್ಟ್ರ ಕಟ್ಟುವ ವಿಷಯಗಳ ಬಗ್ಗೆ ಮಾತಾಡುತ್ತಿದ್ದೇವೆ ಎಂದರು.

ಬಹುಗ್ರಾಮ ಕುಡಿಯುವ ನೀಡಿನ ಯೋಜನೆಯಡಿ 40 ಕೋಟಿ ರೂ. ಗೂ ಹೆಚ್ಚು ವೆಚ್ಚದಲ್ಲಿ ದಂಡಿಗಾನಹಳ್ಳಿಗೆ ನೀರು ನೀಡಲು ಕ್ರಮ ವಹಿಸಲಾಗಿದೆ. ಬಡವರಿಗೆ 98 ಎಕರೆ ಕಂದಾಯ ಜಮೀನು ಮೀಸಲಿಟ್ಟು 1,627 ಹಕ್ಕುಪತ್ರ ಹಾಗೂ ನಿವೇಶನ ಹಂಚಲಾಗಿದೆ. ಒಟ್ಟು 2,687 ನಿವೇಶನಗಳನ್ನು ರಚಿಸಲಾಗಿದೆ. ಇನ್ನೂ 1,080 ನಿವೇಶನ ನೀಡಲು ಅವಕಾಶವಿದ್ದು, ಅದನ್ನು ಕೂಡ ಮುಂದೆ ಮಾಡಲಿದ್ದೇನೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಆದರೆ ಈ 10 ತಿಂಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಆದರೆ ಪಿಎಂ ಫಸಲ್‌ ಬಿಮಾ ಯೋಜನೆಯಡಿ ಜರಬಂಡಹಳ್ಳಿಗೆ 3 ಕೋಟಿ ರೂ. ನೀಡಲಾಗಿದೆ. ರೈತರ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ.

ಹಬ್ಬದೂಟ ಸಾಕಾ, ವರ್ಷವಿಡೀ ಊಟ ಬೇಕಾ ಎಂದು ಜನರು ಚಿಂತಿಸಬೇಕು. ಉಚಿತ ಬಸ್‌ ನೀಡಿದ್ದು, ಬಸ್‌ ಇಲ್ಲದೆ ವಿದ್ಯಾರ್ಥಿಗಳು ಬೀದಿಯಲ್ಲಿ ನಿಲ್ಲುತ್ತಿದ್ದಾರೆ. ಎಲ್ಲರಿಗೂ 10 ಕೆಜಿ ಅಕ್ಕಿ ಎಂದು ಹೇಳಿ ಒಂದು ಕೆಜಿಯೂ ನೀಡುತ್ತಿಲ್ಲ. ಆದರೆ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದೆ. ನಾನು ಶಾಸಕನಾಗಿ ವಸತಿ ಶಾಲೆ ನೀಡಿದ್ದೇನೆ. ಮಂಚೇನಹಳ್ಳಿಯನ್ನು ತಾಲೂಕಾಗಿಸಿದ್ದೇನೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಮಹಿಳೆಯರು ದೂರದ ಬಾವಿಯಿಂದ ನೀರು ತರುತ್ತಿದ್ದರು. ಅದಕ್ಕಾಗಿ ಜಲಜೀವನ್‌ ಮಿಷನ್‌ ನೀಡಲಾಗಿದೆ. ಕೋವಿಡ್‌ ಸಮಯದಲ್ಲಿ ಯಾವುದೇ ಕಾಂಗ್ರೆಸ್‌ ಮುಖಂಡ ಜನರ ಬಳಿ ಬಂದಿರಲಿಲ್ಲ. ಆದರೆ ಬಿಜೆಪಿ ನಾಯಕರು ಜನರಿಗೆ ನೆರವಾಗಿದ್ದರು. ನಾನು ಪ್ರತಿ ಮನೆಗೆ ಆಹಾರ ಕಿಟ್‌ಗಳನ್ನು ತಲುಪಿಸಿದ್ದೆ. ನಾನು ಶಾಸಕನಾಗಿದ್ದಾಗ 15 ಸಾವಿರ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ನೀಡಿದ್ದೆ, ಮಹಿಳಾ ಸಂಘಗಳಿಗೆ ಸಾಲಕ್ಕೆ ಅನುದಾನ ಕೊಡಿಸಿದ್ದೆ. ಆರೋಗ್ಯ ಸಚಿವನಾಗಿ ಜನರಿಗೆ ಲಸಿಕೆ ಕೊಡಿಸಿದ್ದೆ ಎಂದರು.

ಕೇಂದ್ರ ಸರ್ಕಾರ ರೈತರಿಗೆ ಕಿಸಾನ್‌ ಸಮ್ಮಾನ್‌ ನೀಡಿದರೆ, ರಾಜ್ಯದ ಪಾಲನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಉಚಿತ ವಿದ್ಯುತ್‌ ಎಂದು ಹೇಳಿದರೂ ಬಡಜನರು ಪ್ರಿಜ್‌ ಇಟ್ಟುಕೊಂಡರೆ ಅದರ ಲಾಭ ಸಿಗುವುದಿಲ್ಲ. ಪಂಪ್‌ಗೆ ವಿದ್ಯುತ್‌ ಸಂಪರ್ಕ ಬೇಕೆಂದರೆ ರೈತರು 4 ಲಕ್ಷ ರೂ. ಕೊಡಬೇಕಾಗುತ್ತದೆ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತಂದರೆ, ದ್ವೇಷದ ರಾಜಕಾರಣಕ್ಕಾಗಿ ಅದನ್ನು ಮರಳಿ ಕೋಲಾರಕ್ಕೆ ಸೇರಿಸಲಾಗಿದೆ. ನಾನು ಶಾಸಕನಾದ ಬಳಿಕ 5 ವಸತಿ ಶಾಲೆಗಳನ್ನು ನಿರ್ಮಿಸಿದ್ದೇನೆ. ನಾನು ಗಿಮಿಕ್‌ ರಾಜಕಾರಣ ಮಾಡಿಲ್ಲ ಎಂದರು.

ಒಂದು ವಸ್ತುವನ್ನು ಕಳೆದುಕೊಂಡಾಗ ಅದರ ಮಹತ್ವ ಗೊತ್ತಾಗುತ್ತದೆ. ಜನರಿಗೆ ಕಳೆದ ಒಂದು ವರ್ಷದಲ್ಲಿ ಏನು ನಷ್ಟವಾಗಿದೆ ಎಂಬುದು ಗೊತ್ತಾಗಿದೆ. ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡಬೇಕು, ಯುವಜನರಿಗೆ ಉದ್ಯೋಗ ನೀಡಲು ಕೈಗಾರಿಕೆ ಸ್ಥಾಪನೆ ಮಾಡುವ, ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಗುರಿ ಇದೆ ಎಂದರು.

*ಕೈಗಾರಿಕೆ ಆರಂಭ*

ಸಂಸದನಾದ ಬಳಿಕ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ತಂದು, ಮಂಚೇನಹಳ್ಳಿ ತಾಲೂಕಿನಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪಿಸುತ್ತೇನೆ ಎಂದು ಅಭ್ಯರ್ಥಿ ಡಾ.ಕೆ.ಸುಧಾಕರ್‌ ಭರವಸೆ ನೀಡಿದರು. ಈಗಾಗಲೇ 1,200 ಎಕರೆ ಜಮೀನನ್ನು ಕೈಗಾರಿಕೆಗೆ ಗುರುತಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

2 minutes ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

3 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

14 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

15 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

19 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

20 hours ago