ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೋ, ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಮತದಾರರು ನಿರ್ಧರಿಸಿ ಆಗಿದೆ- ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ವಿವರಿಸಿದರು.

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದರು.

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದರು.

ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದರು.

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago